ಬೆಂಗಳೂರು: ಇತ್ತೀಚೆಗೆ ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗಳನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಿಜೆಪಿ ಯವರು ಖಾಸಗಿ ಎಫ್ಎಸ್ಎಲ್ ರಿಪೋರ್ಟ್ ಬಿಡುಗಡೆ ಮಾಡಿದ್ದು, ಅದರಲ್ಲೂ ಪಾಕ್ ಪರ ಘೋಷಣೆ ಕೂಗಿದ್ದು ಪಕ್ಕಾ ಆಗಿತ್ತು. ಹೀಗಾಗೇ ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.
ಮೂವರು ಆರೋಪಿಗಳನ್ನು ಬಂಧಿಸಿದ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಸೋಮವಾರ ಕಾವೇರಿ ನಿವಾಸದಲ್ಲಿ ದಿಢೀರ್ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್, ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಇದ್ದರು.
ಆರೋಪಿಗಳ ಬಂಧನದಿಂದ ಆಗುವ ರಾಜಕೀಯ ಲಾಭ ನಷ್ಟ ಮತ್ತು ವಿಪಕ್ಷಗಳು ಇದನ್ನ ಯಾವ ರೀತಿ ಬಳಸಿಕೊಳ್ತಾರೆ ಅನ್ನೋ ಕುರಿತು ಮಾತುಕತೆ ನಡೆಯಿತು. ಸರ್ಕಾರಕ್ಕೆ ಡ್ಯಾಮೇಜ್ ಆಗದ ರೀತಿಯಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ಸಮಾಲೋಚನೆ ನಡೆಸಿದರು.