News Karnataka Kannada
Tuesday, May 07 2024
ಬೆಂಗಳೂರು ನಗರ

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಿರುವ ಸರ್ಕಾರದ ವಿರುದ್ಧ ಪ್ರತಿಭಟನೆ

Protest against govt allowing students to write exams wearing hijab
Photo Credit : News Kannada

ಬೆಂಗಳೂರು: ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಿರುವ ಸರ್ಕಾರದ ವಿರುದ್ಧ ನಗರದ ಸ್ವತಂತ್ರ ಉದ್ಯಾನವನದಲ್ಲಿ ಇಂದು(ಅ.25) ಪ್ರತಿಭಟನೆ ನಡೆಯಿತು.

ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ ಬುಧುವಾರ ಸ್ವತಂತ್ರ ಉದ್ಯಾನವನದಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ( K E A ) ನಿರ್ಣಯವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಕಾರ್ಯಕರ್ತರು, ಕರ್ನಾಟಕದಲ್ಲಿ ಹಿಜಾಬ್ ಧರಿಸಿ ಶಾಲಾ ಕಾಲೇಜುಗಳ ಪ್ರವೇಶದ ವಿಚಾರದಲ್ಲಿ ಈ ಹಿಂದೆ ಸಾಕಷ್ಟು ಗಲಾಟೆ ಗದ್ದಲಗಳಾಗಿದೆ ಅದರ ಹೊರತಾಗಿಯೂ ಇದೇ ತಿಂಗಳು ಅಂದರೆ ಅಕ್ಟೊಬರ್ ೨೮ ಮತ್ತು ೨೯ ರಂದು ವಿವಿಧ ನಿಗಮ ಮಂಡಳಿಗಳ ಭರ್ತಿಗೆ ನಡೆಯುವ ಪರೀಕ್ಷೆಗಳಿಗೆ ಹಿಜಾಬ್ ಧರಿಸಿ ಹಾಜರಾಗಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆದೇಶ ಹೊರಡಿಸಿರುವುದು ಅಕ್ಷಮ್ಯ .

ಉಚ್ಚ ನ್ಯಾಯಾಲಯಕ್ಕೂ ಅಗೌರವ ತೋರಿಸುತ್ತಿರುವ ಸರಕಾರ:
ಬಾರೀ ಸಂಘರ್ಷಕ್ಕೆ ಕಾರಣವಾಗಿದ್ದ ಹಿಜಾಬ್ ವಿಚಾರದಲ್ಲಿ ಮಾನ್ಯ ಉಚ್ಚ ನ್ಯಾಯಾಲಯವು ಗಂಭೀರವಾಗಿ ಪರಿಗಣಿಸಿ ಶಾಲಾ ಕಾಲೇಜುಗಳಲ್ಲಿ ಅಲ್ಲಿಯ ಸಮವಸ್ತ್ರ ಬಳಕೆ ಮಾಡುವಂತೆ ಆದೇಶಿಸಿ ಹಿಜಾಬ್ ಗೆ ನಿರ್ಬಂಧ ಹೇರಿತ್ತು . ಇದರ ಹೊರತಾಗಿಯೂ ಹಿಜಾಬ್ ಗೆ ಅವಕಾಶ ಕಲ್ಪಿಸುತ್ತಿರುವುದು ಮಾನ್ಯ ಉಚ್ಚ ನ್ಯಾಯಾಲಯದ ತೀರ್ಪಿಗೂ ಅಗೌರವ ಅಪಮಾನ ತೋರಿದಂತೆ ಆಗುತ್ತದೆ . ಅಲ್ಲದೆ ಇಂತಹ ನಿರ್ಣಯಗಳ ಮೂಲಕ ಸರಕಾರ ಅಲ್ಪ ಸಂಖ್ಯಾತರ ಓಲೈಕೆ ಮಾಡುತ್ತಿದೆಯಾ ? ಎಂಬ ಅನುಮಾನಕ್ಕೂ ದಾರಿಮಾಡಿ ಕೊಟ್ಟಂತೆ ಅನುಮಾನ ಮೂಡಿಸುತ್ತದೆ. ಹಾಗಾಗಿ ತಕ್ಷಣ ಪ್ರಾಧಿಕಾರವು ಈ ಆದೇಶವನ್ನು ಹಿಂಪಡೆಯಬೇಕು ಎಂದು ಪ್ರತಿಭಟನೆಯಲ್ಲಿ ಒತ್ತಾಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು