News Karnataka Kannada
Monday, April 29 2024
ಬೆಂಗಳೂರು ನಗರ

ಜೂನ್ ತಿಂಗಳಾಂತ್ಯಕ್ಕೆ ದ್ವಿತೀಯ ಪಿಯು ಪೂರಕ ಪರೀಕ್ಷೆ ದಿನಾಂಕ ಪ್ರಕಟ: ಬಿ.ಸಿ. ನಾಗೇಶ್

B C Nagesh
Photo Credit : News Kannada

 ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆಗಸ್ಟ್‌ನಲ್ಲಿ ಪೂರಕ ಪರೀಕ್ಷೆ ಜೂನ್ ತಿಂಗಳಾಂತ್ಯಕ್ಕೆ ಪೂರಕ ಪರೀಕ್ಷೆ ದಿನಾಂಕ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ತಿಳಿಸಿದರು.

ಶನಿವಾರ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ.ಪೂ. ಶಿಕ್ಷಣ ಇಲಾಖೆಯ ಕಚೇರಿಯಲ್ಲಿ 2022ರ ಏಪ್ರಿಲ್/ಮೇ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಮಾಡಿ ಮಾತನಾಡಿದ ಅವರು, ‘2020ರಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಪೈಕಿ ಶೇ. 61.80ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಬಾರಿ 61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಫಲಿತಾಂಶದಲ್ಲಿ ಉತ್ತೀರ್ಣ ಪ್ರಮಾಣ 0.08ರಷ್ಟು ಏರಿಕೆಯಾಗಿದೆ’ ಎಂದು ಸಚಿವರು ಮಾಹಿತಿ ನೀಡಿದರು.

‘ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪ್ರತಿಯನ್ನು ಪಡೆಯಲು ಇಂದಿನಿಂದಲೇ ಅವಕಾಶ ಕಲ್ಪಿಸಲಾಗಿದೆ. ಅನುತ್ತೀರ್ಣ ವಿದ್ಯಾರ್ಥಿಗಳು ಮರುಮೌಲ್ಯಮಾಪನ ಫಲಿತಾಂಶಕ್ಕೆ ಕಾಯದೇ, ಪೂರಕ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸುವುದು ಉತ್ತಮ’ ಎಂದು ಸಚಿವರು ಸಲಹೆ ನೀಡಿದರು.

‘ಜೂನ್ ತಿಂಗಳಾಂತ್ಯಕ್ಕೆ ಪೂರಕ ಪರೀಕ್ಷೆ ದಿನಾಂಕ ಪ್ರಕಟಿಸಲಾಗುತ್ತದೆ. ಆಗಸ್ಟ್ ತಿಂಗಳಲ್ಲಿ ಪರೀಕ್ಷೆ ನಡೆಯಲಿವೆ’ ಎಂದು ಸಚಿವರು ಮಾಹಿತಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು