ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟದಿಂದಾಗಿ ಮುಚ್ಚಲ್ಪಟ್ಟಿದ್ದ ಬ್ರೂಕ್ಫೀಲ್ಡ್ನಲ್ಲಿರುವ ರಾಮೇಶ್ವರಂ ಕೆಫೆ ಒಂದು ವಾರದ ಬಳಿಕ ರೀ ಓಪನ್ ಆಗುತ್ತಿದೆ.
ಇದೀಗ ಕೆಫೆಯಲ್ಲಿ ಬೆಳಗ್ಗೆಯಿಂದಲೇ ಪೂಜಾ ಕೈಂಕರ್ಯಗಳು ಜರುಗಲಿವೆ. ಪೊಲೀಸರ ಉಪಸ್ಥಿತಿಯಲ್ಲೇ ಇಂದು ಪೂಜಾ ಕಾರ್ಯಕ್ರಮಗಳು ನಡೆಯುತ್ತಿವೆ. ಮಾಲೀಕರು ಈಗಾಗಲೇ ಕೆಫೆಯನ್ನು ಆಲ್ಟ್ರೇಷನ್ ಮಾಡಿಸಿದ್ದಾರೆ. ಕೆಫೆಯ ಪ್ರವೇಶ ದ್ವಾರದಲ್ಲಿ ಎರಡು ಮೆಟಲ್ ಡಿಟೆಕ್ಟರ್ ಅಳವಡಿಕೆ ಸಿಸ್ಟಮ್ ಅಳವಡಿಸಲಾಗಿದೆ. ಪ್ರತಿಯೊಬ್ಬ ಗ್ರಾಹಕರನ್ನು ಹ್ಯಾಂಡ್ ಡಿಟೆಕ್ಟರ್ ಮೂಲಕ ಪರೀಕ್ಷಿಸಿ ಸಿಬ್ಬಂದಿ ಪ್ರವೇಶಕ್ಕೆ ಅನುವು ಮಾಡಿಕೊಡಲಿದ್ದಾರೆ. ಬಾಂಬ್ ಸ್ಫೋಟ ಪ್ರಕರಣದಿಂದ ಎಚ್ಚೆತ್ತು ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.
ನಾಳೆಯಿಂದ (ಮಾ. 9)ರಿಂದ ಸೇವೆ ಆರಂಭವಾಗಲಿದೆ.