ಬೆಂಗಳೂರು: ಕಂದಾಯ ಸಚಿವ ಆರ್.ಅಶೋಕ್ ಅವರು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಕೆಲವೇ ದಿನಗಳಲ್ಲಿ ಬಿಜೆಪಿ ನಾಯಕರಿಂದ ತೀವ್ರ ವಿರೋಧವನ್ನು ಎದುರಿಸುತ್ತಿದ್ದಾರೆ. ಆದರೆ, ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಮಾತ್ರ ನನ್ನ ಪ್ರವೇಶದಿಂದ ಭಯಭೀತರಾಗಿದ್ದಾರೆ ಎಂದು ಆರ್.ಅಶೋಕ್ ಹೇಳಿದ್ದಾರೆ.
ಕೆ.ಗೋಪಾಲಯ್ಯ ಬದಲಿಗೆ ಆರ್.ಅಶೋಕ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ. ಮೂಲಗಳ ಪ್ರಕಾರ, ಆರ್ ಅಶೋಕ್ ಹೊಂದಾಣಿಕೆ ರಾಜಕಾರಣಕ್ಕೆ ಹೆಸರುವಾಸಿಯಾಗಿದ್ದಾರೆ ಮತ್ತು ಅವರು ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ಹಲವಾರು ಬಿಜೆಪಿ ಕಾರ್ಯಕರ್ತರು ಹೇಳುತ್ತಿದ್ದಾರೆ. ಜಿಲ್ಲೆಯ ಹಲವೆಡೆ ಅಶೋಕ್ಗೆ ಮುಜುಗರ ಉಂಟು ಮಾಡುವ ಗೋ ಬ್ಯಾಕ್ ಪೋಸ್ಟರ್ಗಳನ್ನು ಅಂಟಿಸುತ್ತಿದ್ದಾರೆ.
ಅಶೋಕ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿರುವುದು ಸ್ಥಳೀಯ ನಾಯಕರಲ್ಲಿ ಯಾರಿಗೂ ತೃಪ್ತಿ ತಂದಿಲ್ಲ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಅವರು ಗೋಪಾಲಯ್ಯ ಅವರ ಮುಂದುವರಿಕೆಯನ್ನು ಬಯಸುತ್ತಾರೆ.
ಏತನ್ಮಧ್ಯೆ, ಈ ನಿರ್ಧಾರವನ್ನು ಪಕ್ಷದ ರಾಷ್ಟ್ರೀಯ ನಾಯಕತ್ವ ತೆಗೆದುಕೊಂಡಿದೆ ಎಂದು ಅಶೋಕ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳನ್ನು ಸೋಲಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.