News Karnataka Kannada
Friday, May 03 2024
ಬೆಂಗಳೂರು ನಗರ

ದೈವ ನರ್ತಕರು, ಅಪ್ಪು ಸರ್, ಕನ್ನಡಿಗರಿಗೆ ಕಾಂತಾರ ಸಮರ್ಪಣೆ: ರಿಷಬ್‌ ಟ್ವೀಟ್‌ ವೈರಲ್‌

Rishabh's tweet goes viral: Kantara's dedication to divine dancers, Appu sir, Kannadigas
Photo Credit : News Kannada

ಬೆಂಗಳೂರು: ರಿಷಬ್​ ಶೆಟ್ಟಿ ನಿರ್ದೇಶನ ಹಾಗೂ ನಟನೆಯ ‘ಕಾಂತಾರ’ ಸಿನಿಮಾ ಹಿಟ್‌ ಆಗಿದ್ದು, ಎಲ್ಲರಿಗೂ ಗೊತ್ತಿದೆ. ಅದೇ ರೀತಿ ಪ್ರಶಸ್ತಿ ಪಡೆಯುವಲ್ಲಿಯೂ ಸಿನಿಮಾ ದಾಖಲೆ ಮಾಡುತ್ತಲೇ ಸಾಗಿದೆ.

ಇತ್ತೀಚೆಗೆ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಅದರಲ್ಲಿ ಬರೋಬ್ಬರಿ 10 ವಿಭಾಗಗಳಲ್ಲಿ ಕಾಂತಾರ ಸಿನಿಮಾಗೆ ಅವಾರ್ಡ್​ ಸಿಕ್ಕಿರುವುದು ವಿಶೇಷ. ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ಹಾಸ್ಯ ನಟ, ಅತ್ಯುತ್ತಮ ಸಂಗೀತ ನಿರ್ದೇಶನ ಮುಂತಾದ ವಿಭಾಗಗಳಲ್ಲಿ ‘ಕಾಂತಾರ’ ಚಿತ್ರಕ್ಕೆ ಪ್ರಶಸ್ತಿ ಸಿಕ್ಕಿರುವುದನ್ನು ರಿಷಬ್​ ಶೆಟ್ಟಿ ಅವರು ಸಂಭ್ರಮಿಸುತ್ತಿದ್ದಾರೆ.

ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ‘ದೈವ ನರ್ತಕರು, ಅಪ್ಪು ಸರ್ ಮತ್ತು ಕನ್ನಡಿಗರಿಗೆ ಈ ಯಶಸ್ಸು ಸಮರ್ಪಣೆ’ ಎಂದು ಅವರು ಬರೆದುಕೊಂಡಿದ್ದಾರೆ.

ಜನರ ಮನ್ನಣೆಯಿಂದ ಸಿಕ್ಕ ಪ್ರೀತಿಯೇ ಕಾಂತಾರ ಸಿನಿಮಾದ ಯಶಸ್ಸಿಗೆ ಕಾರಣ. ಸೈಮಾ ಅವಾರ್ಡ್ಸ್​ನಲ್ಲಿ ಅತ್ಯುತ್ತಮ ನಿರ್ದೇಶನ, ಪಾಥ್ ಬ್ರೇಕಿಂಗ್ ಸ್ಟೋರಿ, ಅತ್ಯುತ್ತಮ ನಟ, ನಟಿ, ಖಳನಟ, ಹಾಸ್ಯನಟ, ಸಂಗೀತ ನಿರ್ದೇಶಕ, ಗಾಯಕ, ಸಾಹಿತಿ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಮನ ತುಂಬಿ ಬಂದಿದೆ. ಜವಾಬ್ದಾರಿ ಹೆಚ್ಚಿಸಿದೆ. ನಿಮ್ಮ ಪ್ರೀತಿ, ಆಶೀರ್ವಾದ ಹೀಗೆಯೇ ಇರಲಿ. ದೈವ ನರ್ತಕರು, ಅಪ್ಪು ಸರ್ ಹಾಗೂ ಕನ್ನಡಿಗರಿಗೆ ಈ ಎಲ್ಲಾ ಯಶಸ್ಸು ಸಮರ್ಪಣೆ’ ಎಂದು ರಿಷಬ್​ ಶೆಟ್ಟಿ ಪೋಸ್ಟ್​ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು