ಬೆಂಗಳೂರು: ರಾಜರಾಜೇಶ್ವರಿ ನಗರದ ಗೌರಮ್ಮ ಎಂಬುವವರ ಮನೆಯಲ್ಲಿ ದರೋಡೆ ಮಾಡಿ ಪರಾರಿಯಾಗಿದ್ದ ಕಳ್ಳರಲ್ಲಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಗೌರಮ್ಮ ಅವರು ತಮ್ಮ ಮೊಮ್ಮಕ್ಕಳನ್ನು ಟ್ಯೂಷನ್ಗೆ ಬಿಟ್ಟು ಮನೆಗೆ ಬಂದಾಗ ಕಳ್ಳರ ಗ್ಯಾಂಗ್ ವೃದ್ಧೆಯ ಮೇಲೆ ಅಟ್ಯಾಕ್ ಮಾಡಿ ಹಿಂಬದಿಯಿಂದ ಹಿಡಿದು ಕೈ ಕಾಲು ಕಟ್ಟಿ ಬಾಯಿಗೆ ಮಂಕಿ ಕ್ಯಾಪ್ ತುರುಕಿ ಚಿನ್ನಾಭರಣ, ನಗದು ದೋಚಿ ಎಸ್ಕೇಪ್ ಆಗಿದ್ದರು. 15 ಗ್ರಾಂ ತೂಕದ ನೆಕ್ಲೆಸ್, 12 ಗ್ರಾಂ ತೂಕದ ಚಿನ್ನದ ಸರ, 4.5 ಗ್ರಾಂನ ಚಿನ್ನದ ಉಂಗುರ, 8 ಗ್ರಾಂ ತೂಕದ ಚಿನ್ನದ ಓಲೆ ಸೇರಿ ಒಟ್ಟು 120 ಗ್ರಾಂ ಚಿನ್ನದ ಒಡವೆ ಕಳ್ಳತನವಾಗಿತ್ತು. ಜೊತೆಗೆ 100 ಗ್ರಾಂ ಬೆಳ್ಳಿ, 50 ಸಾವಿರ ನಗದು ಲೂಟಿ ಮಾಡಿ ಖದೀಮರು ಎಸ್ಕೇಪ್ ಆಗಿದ್ದರು.
ಈ ಘಟನೆ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸದ್ಯ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.