ಬೆಂಗಳೂರು: ಸತ್ತು ಹೋಗಿದ್ದೇನೆ ಎಂದು ತಲೆಮರೆಸಿಕೊಂಡಿದ್ದ ರೌಡಿಶೀಟರ್ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕಾಡುಬೀಸನಹಳ್ಳಿ ಸೋಮನ ಡ್ರೈವರ್ ಕೊಲೆ ಪ್ರಕರಣದ ಮಲ್ಲಿ ಅಲಿಯಾಸ್ ಮಲ್ಲಿಕಾರ್ಜುನ ಆರೋಪಿಯಾಗಿದ್ದ. ಬಳಿಕ ರಾಜಾನುಕುಂಟೆಯಲ್ಲಿ ಒಂದು ಕೊಲೆ ಕೇಸ್ ಕೂಡ ಈತನ ಮೇಲಿತ್ತು. ಆದರೆ ಕಳೆದ ಎರಡು ವರ್ಷಗಳಿಂದ ಆಸಾಮಿ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ. ಮಲ್ಲಿ ಮನೆಗೆ ಹೋಗಿ ಪೊಲೀಸರು ವಿಚಾರಿಸಿದಾಗ ಸತ್ತು ಹೋಗಿದ್ದಾನೆ ಎಂದು ಕುಟುಂಬಸ್ಥರು, ಮಲ್ಲಿಯ ಗೆಳೆಯರು, ಪರಿಚಿತರು ಹೇಳುತ್ತಿದ್ದಾರೆ.
ರೌಡಿಶೀಟರ್ ಮನೆಯವರು ಮಲ್ಲಿಕಾರ್ಜುನ ಸತ್ತಿದ್ದಾನೆ ಅನ್ನೋದಕ್ಕೆ ಡೆತ್ ಸರ್ಟಿಫಿಕೇಟ್ ಸೇರಿದಂತೆ ಬೇಕಾದ ದಾಖಲೆ ಪತ್ರಗಳನ್ನು ರೆಡಿ ಮಾಡಿದ್ದರು. ಇಷ್ಟಾದರೂ ಸಿಸಿಬಿ ಪೊಲೀಸರಿಗೆ ಅನುಮಾನವಿತ್ತು. ಕೊನೆಗೆ ತಲಾಶ್ ಮಾಡಿ ನೋಡಿದಾಗ ಮಲ್ಲಿ ಬಗ್ಗೆ ಹೆಚ್ಚಿನ ಮಾಹಿತಿ ಸಿಕ್ಕಿದೆ. ಊರೂರು ಸುತ್ತುತ್ತಾ ತಲೆಮರೆಸಿಕೊಂಡಿದ್ದ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿಯನ್ನ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿ ಕಂಬಿ ಹಿಂದೆ ಕಳುಹಿಸಿದ್ದಾರೆ.