ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಕೋವಿಡ್ ನಂತರ ರಾಜ್ಯದಲ್ಲಿ ಆರ್ಥಿಕ ಚೇತರಿಕೆ ತ್ವರಿತವಾಗಿದೆ. ಪ್ರಧಾನಿ ನೇತೃತ್ವದಲ್ಲಿ ದೇಶ ಪ್ರಗತಿಯ ಹಾದಿಯಲ್ಲಿದೆ. ಪ್ರಧಾನಿ ನಾಯಕತ್ವದಲ್ಲಿ ಜಿ.20 ಶೃಂಗಸಭೆ ನಡೆಸಿದ್ದು ರಾಜ್ಯದ ಪ್ರಗತಿಗೆ ಪೂರಕವಾಗಿದೆ ಎಂದರು. ರೈತರಿಗೆ 5 ಲಕ್ಷ ವರೆಗೆ ಶೂನ್ಯಬಡ್ಡಿದರಲ್ಲಿ ಸಾಲಸೌಲಭ್ಯ ನೀಡುವುದಾಗಿ ಘೋಷಿಸಿದ್ದಾರೆ. ಈ ಮೊದಲು ಈ ಮೊತ್ತ 3 ಲಕ್ಷ ರೂ. ಸೀಮಿತವಾಗಿತ್ತು.
ತೀರ್ಥಹಳ್ಳಿಯಲ್ಲಿ ಸಂಶೋಧನಾ ಕೇಂದ್ರ: ತೀರ್ಥಹಳ್ಳಿಯಲ್ಲಿ ಕೃಷಿ ಸಂಶೋಧನಾ ಕೇಂದ್ರಕ್ಕೆ 10 ಕೋಟಿ ರೂ. ಘೋಷಿಸಿದ್ದಾರೆ. ವಸತಿ ರಹಿತ ಮೀನುಗಾರರಿಗೆ ವಿಶೇಷ ಸೌಲಭ್ಯ, ಮೀನುಗಾರಿಕಾ ದೋಣಿಗಳಿಗೆ ಮೋಟಾರ್ ಇಂಜಿನ್ ಅಳವಡಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್: ಬೆಂಗಳೂರಿಗೆ 10 ಸಾವಿರ ಕೋಟಿ ರೂ. ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಮೀನು ಉತ್ಪನ್ನ ರಫ್ತಿಗೆ ಬೈಂದೂರಿನಲ್ಲಿ ಪಾರ್ಕ್, ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ, ನೇಕಾರರಿಗೆ ಸಹಾಯಧನ, ಬೆಂಗಳೂರು ಅಭಿವೃದ್ಧಿ 10 ಸಾವಿರ ಕೋಟಿ ರೂ., ಬಳ್ಳಾರಿ ಮೆಗಾ ಡೈರಿಗೆ 100 ಕೋಟಿ ರೂ. ಅನುದಾನ ಘೋಷಿಸಿದ್ದಾರೆ.
ರಾಮಮಂದಿರ ನಿರ್ಮಾಣ: ರಾಮನಗರದಲ್ಲಿ ಬೃಹತ್ ರಾಮಮಂದಿರ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. ಪ್ರತಿ ಗ್ರಾಪಂಗೆ 60 ಲಕ್ಷ ರೂ. ಅನುದಾನ ಘೋಷಿಸಿದ್ದಾರೆ. ಭೂಸಿರಿ ಯೋಜನೆ ಆರಂಭಿಸಿದ್ದು ಇದರಿಂದ 50 ಲಕ್ಷ ರೈತರಿಗೆ ಅನುಕೂಲವಾಗಲಿದೆ.