ತುಮಕೂರು : ಇತ್ತೀಚೆಗೆ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಡಿ.ಸಿ.ಗೌರಿಶಂಕರ್ ರವರು ಕಳೆದ 2018ರ ಚುನಾವಣೆಯಲ್ಲಿ ನಕಲಿ ಬಾಂಡ್ ವಿತರಿಸಿ ಜನರಿಗೆ ಮೋಸ ಮಾಡಿದ್ದಾರೆ ಹಾಗಾಗಿ ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇತ್ತೀಚೆಗೆ ಹೈಕೋರ್ಟ್ನಲ್ಲಿ ಸುದೀರ್ಘವಾದ ವಾದ ಮಂಡನೆಯಾಗಿ ತೀರ್ಪನ್ನು ಒಂದೇ ಸಾಲಿನಲ್ಲಿ ನೀಡಿದ್ದರು, ಅದನ್ನು ಪ್ರಶ್ನಿಸಿ ಗೌರಿಶಂಕರ್ ಸುಪ್ರೀಂ ಕೋರ್ಟ್ ಕದ ತಟ್ಟಿದ್ದರು. ಅಲ್ಲಿ ಅವರ ಅಪೀಲು ಒಪ್ಪಿಗೆಯಾಗಿ ಚುನಾವಣೆಗೆ ಸ್ಪರ್ಧಿಸಲು ಯಾವುದೇ ರೀತಿಯಾದ ಅಡ್ಡಿಯಿಲ್ಲ, ಸ್ಪರ್ಧಿಸಬಹುದಾಗಿದೆಸದ್ಯಕ್ಕೆ ಕೇಸ್ನ್ನು ತಡೆ ಹಿಡಿಯಲಾಗಿದೆಂದಷ್ಟೇ ಹೇಳಿದೆ.
ಸುಪ್ರೀಂ ಕೋರ್ಟ್ ನಿಂದ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಸಿಕ್ಕಿದ್ದೆ ತಡ, ಕ್ಷೇತ್ರದಲ್ಲಿ ಶಾಸಕ ಡಿ.ಸಿ ಗೌರಿಶಂಕರ್ ಅಭಿಮಾನಿಗಳು,ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ತುಮಕೂರು ಗ್ರಾಮಾಂತರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಡುವೆ ತೀವ್ರ ಪೈಪೋಟಿ ಎದುರಾಗುದ್ದು,ಮತದಾರರು ಯಾರ ಕಡೆ ಮುಖ ಮಾಡಲಿದ್ದಾರೆ ಕಾದು ನೋಡಬೇಕಿದೆ.