ಬೆಂಗಳೂರು: ವೃದ್ಧೆಯೊಬ್ಬರು ಮೊಬೈಲ್ನಲ್ಲಿ ಮಾತನಾಡಿಕೊಂಡು ರಸ್ತೆ ದಾಟುತ್ತಿದ್ದಾಗ ಸ್ಕೂಟರ್ ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಮೃತ ದುರ್ದೈವಿ ತಿಗಳರಪಾಳ್ಯದ ನಿವಾಸಿ ಶಾಂತಮ್ಮ (65)ಎಂದು ತಿಳಿದುಬಂದಿದೆ. ತಮ್ಮ ಮನೆ ಸಮೀಪ ದೇವಾಲಯ ಬಳಿ ಶಾಂತಮ್ಮ ರಸ್ತೆ ದಾಟುವಾಗ ಈ ಘಟನೆ ನಡೆದಿದೆ. ಕೂಡಲೇ ಗಾಯಾಳು ರಕ್ಷಣೆಗೆ ಸ್ಕೂಟರ್ ಸವಾರ ಅರ್ಚಕ ಧಾವಿಸಿದ್ದಾರೆ. ತಾವೇ ಆ್ಯಂಬುಲೆನ್ಸ್ ಮಾಡಿಕೊಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಶಾಂತಮ್ಮ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಸಂಬಂಧ ಸ್ಕೂಟರ್ ಸವಾರನ ವಿರುದ್ಧ ದೂರು ನೀಡಲು ಮೃತ ಶಾಂತಮ್ಮ ಕುಟುಂಬದವರು ನಿರಾಕರಿಸಿದ್ದಾರೆ. ಆದರೆ ಮೃತದೇಹವನ್ನು ತೆಗೆದುಕೊಂಡು ಹೋಗಲು ಆ್ಯಂಬುಲೆನ್ಸ್ ಚಾಲಕ ಪಟ್ಟು ದೂರು ದಾಖಲಿಸುವಂತೆ ಪಟ್ಟು ಹಿಡಿದಿದ್ದಾನೆ. ಕೊನೆಗೆ ಕಾಮಾಕ್ಷಿಪಾಳ್ಯ ಸಂಚಾರ ಠಾಣೆಗೆ ತೆರಳಿ ದೂರು ನೀಡಿದ್ದಾರೆ.