ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಹೆಚ್ಚಾಗುತ್ತಿದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಇನ್ನೂ 2 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳುರು, ಹಾಸನ, ಚಿಕ್ಕಬಳ್ಳಾಪುರದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ,ಯಾದಗಿರಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಹಾವೇರಿ, ಬೆಳಗಾವಿ, ಗದಗ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಉಳಿದಂತೆ ಚಿಕ್ಕಮಗಳೂರು,ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ತುಂತು ಮಳೆಯ ಮುನ್ಸೂಚನೆ ನೀಡಲಾಗಿದೆ.