ಬೆಂಗಳೂರು: ನಮ್ಮ ಮೆಟ್ರೋ ಸೇವೆಯಲ್ಲಿ ಒಂದು ತಿಂಗಳ ಕಾಲ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಹೇಳಿದೆ.
ಮೆಟ್ರೋ ರೈಲು ನಿಗಮವು ಜುಲೈ 10 ರಿಂದ ಆಗಸ್ಟ್ 9ರ ವರೆಗೆ ಬೈಯಪ್ಪನಹಳ್ಳಿ ಹಾಗೂ ಕೃಷ್ಣರಾಜಪುರಂ ನಿಲ್ದಾಣಗಳನ್ನು ಸಂಪರ್ಕಿಸುವ ಸಿಗ್ನಲಿಂಗ್ ಹಾಗೂ ಇತರ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದು, ಬೆಳಗ್ಗೆ 5 ರಿಂದ ಬೆಳಿಗ್ಗೆ 7ರವರೆಗೆ ಗಂಟೆವರೆಗೂ ಈ ಮಾರ್ಗದ ರೈಲುಗಳ ಸೇವೆಯನ್ನು ಸ್ಥಗಿತಗೊಳಿಸುತ್ತಿದೆ.
ಬೈಯಪ್ಪನಹಳ್ಳಿ-ಸ್ವಾಮಿ ವಿವೇಕಾನಂದ ರಸ್ತೆ, ಕೃಷ್ಣರಾಜಪುರ-ವೈಟ್ಫೀಲ್ಡ್(ಕಾಡುಗೋಡಿ) ನಡುವಿನ ರೈಲು ಸಂಚಾರವನ್ನು ಬೆಳಗ್ಗೆ 5 ರಿಂದ 7 ಘಂಟೆವರೆಗೂ ಸ್ಥಗಿತಗೊಳಿಸುತ್ತಿದೆ. ಬೆಳಗ್ಗೆ 7 ಗಂಟೆ ನಂತರ ಬೈಯಪ್ಪನಹಳ್ಳಿ-ಕೆಂಗೇರಿ, ಕೃಷ್ಣರಾಜಪುರ-ವೈಟ್ಫೀಲ್ಡ್(ಕಾಡುಗೋಡಿ) ನಡುವಿನ ರೈಲು ಸಂಚಾರವು ಎಂದಿನಂತೆ ರಾತ್ರಿ 11 ಘಂಟೆವರೆಗೆ ಇರಲಿದೆ.