ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರು ಈಗ ಅಲೆಮಾರಿಯಲ್ಲ ಅರೆ ಅಲೆಮಾರಿಯಾಗಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಚುನಾವಣೆಯಲ್ಲಿ ನಿಲ್ಲಲೂ ಕ್ಷೇತ್ರವಿಲ್ಲದ ಪರಿಸ್ಥಿತಿ ಬಂದಿದೆ ಎಂದಿದ್ದಾರೆ.
ಬಾದಾಮಿಯನ್ನೂ ಬಿಟ್ಟು, ಕೋಲಾರ, ಕೊಪ್ಪಳದಿಂದ ನಿಲ್ಲುವ ಯೋಚನೆ ಮಾಡುತ್ತಿದ್ದಾರೆ. ಇನ್ನೊಂದೆಡೆ ಚಾಮರಾಜಪೇಟೆಯಲ್ಲಿ ವೋಟ್ ಗಾಗಿ ಮುಸ್ಲಿಂರ ಕೈಕಾಲು ಹಿಡಿಯುತ್ತಿದ್ದಾರೆ ಎಂದು ಹೇಳಿದರು.
ಸಿದ್ದರಾಮೋತ್ಸವ ವಿಚಾರವಾಗಿ ಮಾತನಾಡಿದ ಈಶ್ವರಪ್ಪ, ಸ್ವತಃ ಡಿ.ಕೆ.ಶಿವಕುಮಾರ್ ಹೇಳುತ್ತಾರೆ ಸಿದ್ದರಾಮೋತ್ಸವಕ್ಕೂ ಕಾಂಗ್ರೆಸ್ ಗೂ ಯಾವುದೇ ಸಂಬಂಧವಿಲ್ಲ ಎಂದು. ಇದರಿಂದಲೇ ಗೊತ್ತಾಗುತ್ತೆ ಹೊಟ್ಟೆಕಿಚ್ಚು ಯಾರಿಗೆ ಎಂಬುದು ಎಂದರು.