ಬೆಂಗಳೂರು: ಸಿಎಂ ಪಟ್ಟಕ್ಕೆ ಸಿದ್ದರಾಮಯ್ಯ ಹೆಸರು ಬಹುತೇಕ ಅಂತಿಮ ಗೊಂಡಿದ್ದು, ನಾಳೆ ( ಗುರುವಾರ) ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಕಂಠೀರವ ಸಭಾಂಗಣದಲ್ಲಿ ಸಮಾರಂಭ ನಡೆಯಲಿದೆ.
ಶುಕ್ರವಾರ ಅಮಾವಾಸ್ಯೆ ಆದ ಕಾರಣ ನಾಳೆಯೇ ಪ್ರಮಾಣವಚನ ಸ್ವೀಕರಿಸಬೇಕೆಂದು ಸಿದ್ದರಾಮಯ್ಯ ಬೆಂಬಲಿಗ ಶಾಸಕರು ಯೋಜನೆ ಹಾಕಿಕೊಂಡಿದ್ದಾರೆ . ಇದೇ ಸಮಾರಂಭದಲ್ಲಿ ವಿವಿಧ ಗ್ಯಾರಂಟಿ ಯೋಜನೆ ಜೊತೆಗೆ ವಿವಿಧ ಹೊಸ ಯೋಜನೆ ಘೋಷಣೆ ಸಾಧ್ಯತೆ ಇದೆ. ಸಿದ್ದರಾಮಯ್ಯ ಬೆಂಗಳೂರಿನ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ 70ಕ್ಕೂ ಹೆಚ್ಚು ಪೊಲೀಸರು ಕಾವಲು ಕಾಯುತ್ತಿದ್ದಾರೆ.