ಬೆಂಗಳೂರು, ನ.17: ಕಳೆದ ವಾರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ 22 ವರ್ಷದ ಯೋಧರೊಬ್ಬರು ಗುರುವಾರ ಮೃತಪಟ್ಟಿದ್ದಾರೆ.
ಚೆನ್ನೈ ರೆಜಿಮೆಂಟ್ ಗೆ ಸೇರಿದ ಮೃತರನ್ನು ಚೇತನ್ ಎಂದು ಗುರುತಿಸಲಾಗಿದೆ. ಕೋಲಾರ ಜಿಲ್ಲೆಯ ಚಿನ್ನಕೋಟೆ ಗ್ರಾಮದ ನಿವಾಸಿಯಾದ ಅವರು ನವೆಂಬರ್ 7 ರಂದು ಕಾಮಾಕ್ಷಿಪಾಳ್ಯದಲ್ಲಿ ಅಪಘಾತಕ್ಕೀಡಾಗಿದ್ದರು.
ಚೇತನ್ ಅವರನ್ನು ಬೆಂಗಳೂರಿನ ಯಲಹಂಕ ಬಳಿಯ ಕಮಾಂಡೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚೇತನ್ ಮೂರು ವರ್ಷಗಳ ಹಿಂದೆ ಸೈನ್ಯಕ್ಕೆ ಸೇರಿದ್ದು, ತನ್ನ ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಲು ಬೆಂಗಳೂರಿಗೆ ಬಂದಿದ್ದರು.