ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಶ್ರಮಿಸಿದ್ದ ಚುನಾವಣಾ ಚಾಣಾಕ್ಷ್ಯ ಬಳ್ಳಾರಿ ಮೂಲದ ಸುನೀಲ್ ಕನಗೋಲು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಲಹೆಗಾರರಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ. ಕನಗೋಲು ಪೇಸಿಎಂನಂತಹ ಅಭಿಯಾನಗಳ ಮೂಲಕ ಹಿಂದಿನ ಸರ್ಕಾರ ಭ್ರಷ್ಟ ಸರ್ಕಾರ ಎಂದು ಜನರ ಮುಂದೆ ಬಿಂಬಿಸುವಲ್ಲಿ ಯಶಸ್ವಿಯಾಗಿದ್ದರು. ತನ್ಮೂಲಕ ಕಾಂಗ್ರೆಸ್ಗೆ ಲಾಭ ತಂದುಕೊಟ್ಟಿದ್ದರು. ಇದೀಗ ಸಿದ್ದರಾಮಯ್ಯ ಅವರು, ಕನುಗೋಲು ಅವರನ್ನೇ ತಮ್ಮ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆಗಾರರಾಗಿ ಸುನೀಲ್ ಕನಗೋಲು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.