News Karnataka Kannada
Saturday, May 04 2024
ಬೆಂಗಳೂರು ನಗರ

ಟ್ಯಾಬ್ಲೋ ತಿರಸ್ಕಾರ: ಕನ್ನಡಿಗರಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿದೆ- ಸಿಎಂ

ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ, ಇಲ್ಲಿರುವುದು ಒಬ್ಬರೇ ಸಿಎಂ. ಅದು ಸ್ಟ್ರಾಂಗ್‌ ಸಿಎಂ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Photo Credit : News Kannada

ಬೆಂಗಳೂರು: ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್​ಗಾಗಿ ಕಳುಹಿಸಲಾಗಿದ್ದ ಕರ್ನಾಟಕದ ನಾಲ್ಕು ಟ್ಯಾಬ್ಲೋ ಪರಿಕಲ್ಪನೆಗಳನ್ನು ಆಯ್ಕೆ ಸಮಿತಿ ತಿರಸ್ಕರಿಸಿದ್ದು, ರಾಜ್ಯದ 7 ಕೋಟಿ ಕನ್ನಡಿಗರಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಸಿಎಂ, ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಎಂದರು.

ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ನೆಲದ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗಗೈದ ಅಪ್ರತಿಮ ದೇಶಪ್ರೇಮಿ ರಾಣಿ ಚೆನ್ನಮ್ಮ ಅವರ ಸ್ತಬ್ಧಚಿತ್ರ, ಕರುನಾಡಿನ ಪ್ರಾಕೃತಿಕ ಸೌಂದರ್ಯ ಮತ್ತು ಬ್ರಾಂಡ್ ಬೆಂಗಳೂರು ಹೀಗೆ 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ ಎಂದರು.

ಕನ್ನಡ-ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು. ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ ನ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು