ಬೆಂಗಳೂರು: ಜೂನ್ 2(ಶುಕ್ರವಾರ) ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಇಂದಿನ ಸಭೆಯಲ್ಲಿ ಐದು ಗ್ಯಾರಂಟಿಗಳಿಗೆ ಅಂತಿಮ ಮುದ್ರೆ ಬೀಳಲಿದೆ. ಖುದ್ದು ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್ ಬಳಿಕ ಗ್ಯಾರಂಟಿ ಘೋಷಣೆಗೆ ಸಜ್ಜಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಎಲ್ಲಾ ಇಲಾಖೆ ಜತೆ ಸಭೆ ನಡೆಸಿದ್ದು, ಅಂತಿಮ ನಿರ್ಧಾರಕ್ಕೆ ಬಂದಿದ್ದಾರೆ. ರಾಜ್ಯದ ಜನರಿಗೆ ಫ್ರೀ ಗಿಫ್ಟ್ ಕೊಡಲು ತೀರ್ಮಾನಿಸಿದ್ದಾರೆ.
ಅದಕ್ಕಾಗಿ ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮಹಿಳೆಯರ ಫ್ರೀ ಬಸ್ಪಾಸ್, ಮನೆ ಒಡತಿಯರ ಅಕೌಂಟ್ಗೆ 2 ಸಾವಿರ ಹಣ, 200 ಯೂನಿಟ್ ಉಚಿತ ವಿದ್ಯುತ್, ನಿರುದ್ಯೋಗ ಭತ್ಯೆ ಹಾಗೂ ಫ್ರೀ 10 ಕೆಜಿ ಅಕ್ಕಿ ವಿತರಣೆ ಬಗ್ಗೆ ಸರ್ಕಾರ ತನ್ನ ನಿರ್ಧಾರ ಪ್ರಕಟಿಸಲಿದೆ.