ಬೆಂಗಳೂರು : ಏರೋ ಇಂಡಿಯಾ ಆಯೋಜನೆಯು ರಕ್ಷಣಾ ಕ್ಷೇತ್ರಕ್ಕೆ ಬಹುದೊಡ್ಡ ಉತ್ತೇಜನ ನೀಡುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರದಿಂದ ಆರಂಭವಾಗಲಿರುವ ಏರೋ ಇಂಡಿಯಾ 2023ರ ಕಾರ್ಯಕ್ರಮದ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಏರೋ ಇಂಡಿಯಾ ಆಯೋಜನೆ ಆಗುತ್ತಿರುವುದು ಇಲ್ಲಿನ ಕೌಶಲ್ಯಯುತ ಯುವಕರಿಗೆ ಉದ್ಯೋಗ ಸೃಜನೆ ಮಾಡಲು ಪೂರಕವಾಗಲಿದೆ ಎಂದು ತಿಳಿಸಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿಯವರಿಂದ ಇದು ಸಾಧ್ಯವಾಗಿದೆ. ಏರೋ ಇಂಡಿಯಾ ದೇಶದ ಐಟಿ ಕ್ಯಾಪಿಟಲ್ನಲ್ಲಿ ನಡೆಯುತ್ತಿದೆ. ಅಂತಾರಾಷ್ಟ್ರೀಯ ಮಟ್ಟದ ನಾಯಕರು ಆಗಮಿಸುತ್ತಿದ್ದಾರೆ. ನಮ್ಮ ಉತ್ಪಾದನೆ ಹಾಗೂ ಕೌಶಲ್ಯಗಳ ಪ್ರದರ್ಶನ ಮಾಡೋಕೆ ಇದು ವೇದಿಕೆಯಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕ, ದೇಶಕ್ಕೆ ಆರ್ಥಿಕ ಬಲ ನೀಡುವುದರಲ್ಲಿ ಮೇಲಿನ ಸ್ಥಾನದಲ್ಲಿದೆ. ರಾಜ್ಯ, ಸೇನೆಗೆ ಬೇಕಾದ ಅನೇಕ ಕಂಪನಿಗಳಿಗೆ ಜಾಗ ನೀಡಿದೆ. ರಾಜ್ಯ ಐಟಿ ಉತ್ಪಾದನಾ ಕ್ಯಾಪಿಟಲ್ ಆಗಿದೆ. 100ಕ್ಕೂ ಅಧಿಕ ಫ್ರೆಂಡ್ಲಿ ಕಂಟ್ರಿಗಳು ಈ ಶೋದಲ್ಲಿ ಭಾಗಿಯಾಗುತ್ತವೆ. ಕಳೆದ ಎಲ್ಲ ವರ್ಷಗಳ ಏರೋ ಇಂಡಿಯಾ ದಾಖಲೆಗಳನ್ನು ಈ ಶೋ ಮುರಿಯಲಿದೆ. ವಿಂಗ್ಸ್ ಆಫ್ದ ಫ್ರೂಚರ್ ಹೆಸರನಲ್ಲಿ ಇಂಡಿಯಾ ಪೆವಿಲಿಯನ್ ಕಾಣಲಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.