ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಬಾಡಿಗೆದಾರರಿಗೂ ಉಚಿತ ವಿದ್ಯುತ್ ಸಿಗಲಿದೆ ಎಂದು ಹೇಳಿದ್ದರು. ಆದರೆ ಸೋಮವಾರ ಬಿಡುಗಡೆಯಾದ ಮಾರ್ಗಸೂಚಿಯಲ್ಲಿ ‘ಒಬ್ಬರ ಹೆಸರಿನಲ್ಲಿ ಎಷ್ಟೇ ಆರ್ ಆರ್ ಸಂಖ್ಯೆಗಳಿದ್ದರೂ ಒಂದಕ್ಕೆ ಮಾತ್ರ ಸೌಲಭ್ಯ ಲಭ್ಯವಾಗಲಿದೆ’ ಎಂದು ನಮೂದಿಸಲಾಗಿತ್ತು. ಹೀಗಾಗಿ ಬಾಡಿಗೆದಾರರಿಗೆ ಉಚಿತ ವಿದ್ಯುತ್ ಸಿಗುವ ಬಗ್ಗೆ ಗೊಂದಲ ಉಂಟಾಗಿತ್ತು.
ಇದೀಗ ಕರ್ನಾಟಕ ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ನಲ್ಲಿ ಟ್ವೀಟ್ ಮಾಡಿ ಗೊಂದಲ ನಿವಾರಿಸುವ ಕೆಲಸ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಇನ್ನೂರು ಯೂನಿಟ್ ಗಳ ಒಳಗೆ ವಿದ್ಯುತ್ ಬಳಕೆ ಮಾಡುವ ಬಿಲ್ ಕಟ್ಟುವ ಅಗತ್ಯವಿಲ್ಲ. ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದಿದ್ದಾರೆ.
1 ವಾಸವಿರುವ ಮನೆಯ ಆರ್ ಆರ್ ಸಂಖ್ಯೆಯೊಂದಿಗೆ ತಮ್ಮ ಆಧಾರ್ ಲಿಂಕ್ ಮಾಡಬೇಕು.
2 ಇದಕ್ಕೆ ಬಾಡಿಗೆ ಮನೆಯ ಕರಾರು ಪತ್ರ (Contract letter) ವನ್ನು ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕು.
3 ಒಂದು ದಾಖಲೆಯನ್ನು ಒಂದು ಮೀಟರ್ ನೊಂದಿಗೆ ಮಾತ್ರ ಲಿಂಕ್ ಮಾಡಲು ಅವಕಾಶ.
4 ಮನೆ ಬದಲಾಯಿಸಿದರೆ, ಹಿಂದಿನ ಮನೆಯ ಮೀಟರ್ ನೊಂದಿಗಿನ ಲಿಂಕ್ ತೆಗೆಯಬೇಕು.
5 ಹೊಸ ಬಾಡಿಗೆ ಮನೆಯ ಆರ್ ಆರ್ ನಂಬರ್ ಮತ್ತು ಆಧಾರ್ ಕಾರ್ಡ್ ಮತ್ತೊಮ್ಮೆ ಲಿಂಕ್ ಮಾಡಬೇಕು.
ಸ್ವಂತ ಮನೆಯವರು ಈ ರೀತಿ ಮಾಡಬೇಕು
1 ಆರ್ ಆರ್ ನಂಬರ್ ನೊಂದಿಗೆ ಆಧಾರ್ ಲಿಂಕ್ ಮಾಡಬೇಕು.
2 ಒಂದಕ್ಕಿಂತ ಹೆಚ್ಚು ಮನೆಯಿದ್ದರೆ ಒಂದು ಮನೆಗೆ ಮಾತ್ರ ಅವಕಾಶ.
3 ಎರಡು ಮೀಟರ್ ಹೊಂದಿದ್ದರೆ ಯಾವುದಾದರೂ ಒಂದಕ್ಕೆ ಮಾತ್ರ ಸೌಲಭ್ಯ ಲಭ್ಯ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.
ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…
ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…
ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…
ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…
ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…