News Karnataka Kannada
Monday, April 29 2024
ಬೆಂಗಳೂರು ನಗರ

ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದಿಂದ ಥೋಮಸ್ ನೀಲಿಯಾರ ಸ್ಪರ್ಧೆ ಆಕಾಂಕ್ಷಿ

Thomas Neeliyara aspirant for Sarvajna Nagara, assembly constituency, Bengaluru
Photo Credit : News Kannada

ಬೆಂಗಳೂರು: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮಾಜಿ ಸದಸ್ಯ, ಬಿಜೆಪಿ ಕೇರಳ ಪ್ರಭಾರಿ ಥೋಮಸ್ ಚೆರಿಯನ್ ನೀಲಿಯಾರ  ಅವರು ಸರ್ವಜ್ಞ ನಗರ ಕ್ಷೇತ್ರದ ಬಿಜೆಪಿ ನಾಮಾಂಕಿತ ಅಭ್ಯರ್ಥಿಗಳ ಪಟ್ಟಿಯಲ್ಲಿ ಒಬ್ಬರಾಗಿದ್ದಾರೆ.

ಮೂಲತಃ ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ಗ್ರಾಮದ ನಿವಾಸಿ ಥೋಮಸ್ ಚೆರಿಯನ್ ನೀಲಿಯಾರ ಮಂಗಳೂರು ವಿಶ್ವವಿದ್ಯಾಲಯದ ಕಾನೂನು ಪದವೀಧರರು. ಕಳೆದ ೨೫ ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವ ಅವರು ಅಲ್ಪಸಂಖ್ಯಾತ ಮೋರ್ಚಾದ ಮಾಜಿ ಸದಸ್ಯರು ಹಾಗೂ ಕೇರಳದ ಪ್ರಭಾರಿ ಆಗಿದ್ದು, ಬೆಂಗಳೂರು ನಗರ ವಿಶ್ವವಿದ್ಯಾಲಯ ಮಾಜಿ ಸಿಂಡಿಕೇಟ್ ಸದಸ್ಯರೂ ಆಗಿದ್ದಾರೆ.

ಸರ್ವಜ್ಞ ನಗರದ ಹಾಲಿ ಕಾಂಗ್ರೆಸ್ ಶಾಸಕರ ವಿರುದ್ಧ ಬಿಜೆಪಿ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಕಣಕ್ಕಿಳಿಸಿದಲ್ಲಿ ಉತ್ತಮ ಫಲಿತಾಂಶ ಸಿಗುವ ಸಾಧ್ಯತೆ ಇದ್ದು, ಇದರಿಂದ ಬಿಜೆಪಿಗೆ ಮುಂಬರುವ  ಲೋಕಸಭಾ ಚುನಾವಣೆಯಲ್ಲೂ ಉತ್ತಮ ಫ ಲಿತಾಂಶ ದೊರೆಯಲಿದೆ ಎನ್ನಲಾಗಿದೆ.  ಸರ್ವಜ್ಞ ನಗರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಸದಸ್ಯರ ಸಂಖ್ಯೆ ಅಧಿಕವಾಗಿದೆ. ಈ ಕಾರಣದಿಂದ ಥೋಮಸ್ ಚೆರಿಯನ್ ನೀಲಿಯಾರ ಸ್ಪರ್ಧೆ ಪಕ್ಷಕ್ಕೆ ಬಲ ನೀಡಲಿದೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು