ಬೆಂಗಳೂರು: 6 ರಿಂದ 8 ನೇ ತರಗತಿಗಳ ನಡುವೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಬೋಧಿಸುವ ರಾಜ್ಯದಾದ್ಯಂತ ಸರ್ಕಾರಿ ಶಾಲೆಗಳಿಗೆ 15,000 ಪದವೀಧರ ಸಹಾಯಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ, ಮೂವರು ಮಂಗಳಮುಖಿಯರನ್ನು ಆಯ್ಕೆ ಮಾಡಲಾಗಿದೆ.
ಅಧಿಕಾರಿಗಳ ಪ್ರಕಾರ, 10 ಮಂಗಳಮುಖಿಯರು ಲಿಖಿತ ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ ಮೂವರನ್ನು ಆಯ್ಕೆ ಮಾಡಲಾಗಿದೆ.
ಕುತೂಹಲಕಾರಿ ಸಂಗತಿಯೆಂದರೆ, ಡಿಪಿಐನಲ್ಲಿ 15,000 ಹುದ್ದೆಗಳು ಖಾಲಿಯಿದ್ದರೂ, ಕೇವಲ 13,363 ಮಂದಿ ಮಾತ್ರ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. 1,637 ಹುದ್ದೆಗಳು ಖಾಲಿ ಉಳಿದಿವೆ.
ಅಧಿಕಾರಿಗಳ ಪ್ರಕಾರ, ಬೋಧನಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದ ಎಂಜಿನಿಯರಿಂಗ್ ಹಿನ್ನೆಲೆಯ 34 ಅಭ್ಯರ್ಥಿಗಳಲ್ಲಿ 19 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.