News Karnataka Kannada
Monday, April 29 2024
ಬೆಂಗಳೂರು ನಗರ

ಶೀಘ್ರದಲ್ಲಿ ತುಳು ಭಾಷೆ ರಾಜ್ಯದ 2 ನೇ ಅಧೀಕೃತ ಭಾಷೆಯಾಗಿ ಘೋಷಣೆ

: ಮಂಗಳೂರು ನಗರ ಉತ್ತರ ಕ್ಷೇತ್ರದ ಮಾಜಿ ಶಾಸಕರಾದ ಮೋಹಿಯುದ್ದೀನ್ ಬಾವ ಅವರ ಮನವಿಗೆ ಸ್ಪಂದಿಸಿದ ವಿಧಾನಪರಿಷತ್ ಸದಸ್ಯ ಬಿಎಂ ಫಾರೂಕ್ ಅವರು, ತುಳು ಭಾಷೆಯನ್ನು ಕರ್ನಾಟಕ ರಾಜ್ಯದ 2 ನೇ ಅಧೀಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕೆಂದು ವಿಧಾನಪರಿಷತ್ ಸದಸ್ಯರಾದ ಬಿಎಂ ಫಾರೂಕ್ ಅವರು ಇಂದು (ಫೆ.28) ರಂದು ವಿಧಾನಪರಿಷತ್ ನಲ್ಲಿ ಸರ್ಕಾರದ ಗಮನ ಸೆಳೆಯುವ ಪ್ರಶ್ನೋತ್ತರ ಕಲಾಪದಲ್ಲಿ ಪ್ರಸ್ತಾಪಿಸಿದ್ದಾರೆ.
Photo Credit : News Kannada

ಬೆಂಗಳೂರು: ಮಂಗಳೂರು ನಗರ ಉತ್ತರ ಕ್ಷೇತ್ರದ ಮಾಜಿ ಶಾಸಕರಾದ ಮೋಹಿಯುದ್ದೀನ್ ಬಾವ ಅವರ ಮನವಿಗೆ ಸ್ಪಂದಿಸಿದ ವಿಧಾನಪರಿಷತ್ ಸದಸ್ಯ ಬಿಎಂ ಫಾರೂಕ್ ಅವರು, ತುಳು ಭಾಷೆಯನ್ನು ಕರ್ನಾಟಕ ರಾಜ್ಯದ 2 ನೇ ಅಧೀಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕೆಂದು ವಿಧಾನಪರಿಷತ್ ಸದಸ್ಯರಾದ ಬಿಎಂ ಫಾರೂಕ್ ಅವರು ಇಂದು (ಫೆ.28) ರಂದು ವಿಧಾನಪರಿಷತ್ ನಲ್ಲಿ ಸರ್ಕಾರದ ಗಮನ ಸೆಳೆಯುವ ಪ್ರಶ್ನೋತ್ತರ ಕಲಾಪದಲ್ಲಿ ಪ್ರಸ್ತಾಪಿಸಿದ್ದಾರೆ.

ಈ ಕುರಿತಂತೆ ಕರ್ನಾಟಕ ಸರ್ಕಾರದ ಪರವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ  ಶಿವರಾಜ್ ತಂಗಡಗಿ ಅವರಿಗೆ ಪ್ರಶ್ನೆ ಮಾಡಿದರು. ಈ ಕುರಿತಂತೆ ಇಂದು ಸದನದಲ್ಲಿ ವಿಸ್ತೃತವಾಗಿ ಚರ್ಚೆಯಾಗಿ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಈಗಾಗಲೇ ಒಂದಕ್ಕಿಂತ ಹೆಚ್ಚು ಅಧೀಕೃತ ಭಾಷೆಗಳಿರುವ ರಾಜ್ಯಗಳಿಗೆ ವರದಿ ನೀಡುವಂತೆ ಪತ್ರ ಬರೆದು ಈವರೆಗೂ ವರದಿ ಬರದ ಕಾರಣ ಕೂಡಲೇ ಕರ್ನಾಟಕ ಸರ್ಕಾರದ ಪರವಾಗಿ ಅಧಿಕಾರಿಗಳ ತಂಡವನ್ನು ಸದರಿ ರಾಜ್ಯಗಳಿಗೆ ಕಳುಹಿಸಿ ಕೂಡಲೇ ಮಾಹಿತಿ ಕರ್ನಾಟಕ ಸರ್ಕಾರಕ್ಕೆ ತರಿಸಿಕೊಂಡು ಕೆಲವೇ ದಿನಗಳಲ್ಲಿ ತುಳು ಭಾಷೆಯನ್ನು ಕರ್ನಾಟಕದ 2 ನೇ ಅಧೀಕೃತ ಭಾಷೆಯನ್ನಾಗಿ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ತುಳು ಭಾಷೆಯನ್ನು ಸಂವಿಧಾನದ 8 ನೇ ಪರಿಚ್ಚೇದಕ್ಕೆ ಸೇರಿಸುವ ನಿಟ್ಟಿನಲ್ಲಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ, ಈ ಕುರಿತಂತೆ ಸಹ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗುವುದು ಎಂದು ಸದನದಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು