ಬೆಂಗಳೂರು: ಬೆಂಗಳೂರಿನ ಕಾಡುಗೋಡಿಯಲ್ಲಿ ಘೋರ ದುರಂತವೊಂದು ನಡೆದು ಹೋಗಿತ್ತು ವೈಟ್ಫೀಲ್ಡ್ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಇಬ್ಬರೂ ಸ್ಥಳದಲ್ಲೇ ಮೃತಪಟ್ಟ ಪ್ರಕರಣ ಸಂಬಂಧ ಪೊಲೀಸರು ಬೆಸ್ಕಾಂನ ಇಇ ಶ್ರೀರಾಮ್ ಸೇರಿದಂತೆ ಐವರು ಸಿಬ್ಬಂದಿಯನ್ನು ಬಂಧಿಸಿದ್ದಾರೆ.
ಕಾರ್ಯನಿರ್ವಾಹಕ ಅಭಿಯಂತರ ಶ್ರೀರಾಮ್, ಸಹಾಯಕ ಕಾರ್ಯನಿರ್ವಕ ಅಭಿಯಂತರ ಸುಬ್ರಹ್ಮಣ್ಯ, ವೈಟ್ ಫೀಲ್ಡ್ ವಿಭಾಗದ ಸಹಾಯಕ ಅಭಿಯಂತರ ಚೇತನ್, ವೈಟ್ ಫೀಲ್ಡ್ ವಿಭಾಗದ ಕಿರಿಯ ಅಭಿಯಂತರ ರಾಜಣ್ಣ, ಸ್ಟೇಷನ್ ಆಪರೇಟರ್ ಮಂಜುನಾಥ್ ಬಂಧಿತರಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.