ಬೆಂಗಳೂರು: ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಸೇದಿ ಆತಂಕ ಸೃಷ್ಟಿಸಿದ್ದ ಪ್ರಯಾಣಿಕನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪ್ರವೀಣ್ ಕುಮಾರ್ ಬಂಧಿತ ಆರೋಪಿ.
ಅಹಮದಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಆರೋಪಿ ಆಕಾಶ್ ಏರ್ ವಿಮಾನದಲ್ಲಿ ನಿಯಮ ಉಲ್ಲಂಘಿಸಿದ್ದಾನೆ. ಕೆಐಎಬಿಯಲ್ಲಿ ಪ್ರವೀಣ್ ಕುಮಾರ್ನನ್ನು ಬಂಧಿಸಿ ಏರ್ಪೋರ್ಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಅಸ್ಸಾಂನಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕ ಶೇಹರಿ ಚೌದರಿ ಎಂಬಾತ ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಸೇದಿ ಆತಂಕ ಸೃಷ್ಟಿಸಿದ್ದ. 6E 716 ಇಂಡಿಗೂ ವಿಮಾನದಲ್ಲಿ ಮಧ್ಯರಾತ್ರಿ 1:30 ರ ವೇಳೆ ಈ ಘಟನೆ ನಡೆದಿತ್ತು.