ಬೆಂಗಳೂರು: ಅದಮ್ಯ ಚೇತನಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಭೇಟಿ

ಬೆಂಗಳೂರು, ಡಿ.31: ಅದಮ್ಯ ಚೇತನ ಸಂಸ್ಥೆ ನಡೆಸುತ್ತಿರುವ ಶೂನ್ಯ ತ್ಯಾಜ್ಯ ಅಡುಗೆ ಮನೆಯಂತಹ ಹೊಸ ಸಾಧ್ಯತೆಗಳ ಬಗ್ಗೆ ಮಾನ್ಯ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್‌ ಷಾ ಬಹಳಷ್ಟು ಕುತೂಹಲದಿಂದ ವೀಕ್ಷಿಸಿದರು.

ಇಂದು ಬೆಂಗಳೂರು ನಗರದ ಗವಿಪುರಗುಟ್ಟಳ್ಳಿಯಲ್ಲಿರುವ ಅದಮ್ಯ ಚೇತನ ಸಂಸ್ಥೆಯ – ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಭೇಟಿ ನೀಡಿ, ಅಡುಗೆ ಮನೆಯಲ್ಲಿ ಪ್ರತಿನಿತ್ಯ ನಡೆಯುವಂತಹ ಅಡುಗೆ ತಯಾರಿಯ ಕೆಲಸಗಳ ಬಗ್ಗೆ ವಿಸ್ತ್ರತವಾಗಿ ಮಾಹಿತಿ ಪಡೆದುಕೊಂಡರು. ಅದಮ್ಯ ಚೇತನ ಸಂಸ್ಥೆ ಸ್ಥಾಪನೆಯ ಹಿಂದೆ ದಿವಂಗತ ಅನಂತಕುಮಾರ್‌ ಅವರ ಅದಮ್ಯ ಕನಸುಗಳ ಬಗ್ಗೆ ಡಾ. ತೇಜಸ್ವಿನಿ ಅನಂತಕುಮಾರ್‌ ಗೃಹ ಸಚಿವರಿಗೆ ವಿವರಣೆ ನೀಡಿದರು. ಪ್ರತಿ ನಿತ್ಯ ಸುಮಾರು 70 ಸಾವಿರಕ್ಕೂ ಹೆಚ್ಚು ಊಟಗಳನ್ನ ಈ ಅಡುಗೆ ಮನೆಯಲ್ಲಿ ತಯಾರಿಸಲಾಗುತ್ತದೆ.

ಈ ಪ್ರಕ್ರಿಯೆಯಲ್ಲಿ ಯಾವುದೇ ಥರಹದ ತ್ಯಾಜ್ಯ ಉತ್ಪತ್ತಿಯಾಗುವುದಿಲ್ಲ. ಹಾಗೆಯೇ, ಉಪಯೋಗಿಸಿದ ನೀರಿನ ಮರುಬಳಕೆಯನ್ನು ಮಾಡಲಾಗುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳನ್ನ ಬಳಸದೇ ಅಡುಗೆ ಮಾಡುವುದು ಈ ಅಡುಗೆ ಮನೆಯ ಮತ್ತೊಂದು ವಿಶೇಷ ಎಂದು ವಿವರಿಸಿದರು. ಅವರ ಚಿಂತನೆಯ ಹಾದಿಯಲ್ಲಿಯೇ ನಾವುಗಳು ಹಸಿರು ಭಾನುವಾರ, ದೇಗುಲ ದರ್ಶನ, ಅನಂತಕುಮಾರ್‌ ಪ್ರತಿಷ್ಠಾನದ ಮೂಲಕ ಸಮಾಜ ಸೇವೆಯಂತಹ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೀವಿ. ಹಾಗೆಯೇ, ಅನಂತಕುಮಾರ್‌ ಪ್ರತಿಷ್ಠಾನದ ಮೂಲಕ ಯುವ ಜನತೆಯಲ್ಲಿ ನಾಯಕತ್ವ ಗುಣಗಳನ್ನ ಬೆಳಸುತ್ತಿರುವುದನ್ನೂ ಕೇಳಿ ಸಂತಸ ಪಟ್ಟರು.

ನಂತರ ಅನಂತ ಸೇವಾ ಉತ್ಸವದಲ್ಲಿ ಭಾಗವಹಿಸಿ “ತೇಜಸ್‌ ಯುದ್ದವಿಮಾನ ಅಭಿವೃದ್ದಿಯ ಯಶೋಗಾಥೆ” ಎನ್ನುವ ಪುಸ್ತಕದ ಕನ್ನಡ ಅವತರಣಿಕೆಯನ್ನು ಲೋಕಾರ್ಪಣೆಗೊಳಿಸಿದರು. ಸಂಪೂರ್ಣ ಸ್ವದೇಶಿ ನಿರ್ಮಿತ ತೇಜಸ್‌ ಯುದ್ದವಿಮಾನದ ವಿನ್ಯಾಸದಲ್ಲಿ ಡಾ. ತೇಜಸ್ವಿನಿ ಅನಂತಕುಮಾರ್‌ ಅವರು ಸೇವೆ ಸಲ್ಲಿಸಿದ್ದರು, ಈ ಪುಸ್ತಕದ ಕನ್ನಡ ಅವತರಣಿಕೆಯ ಲೋಕಾರ್ಪಣೆಯ ಸಂಧರ್ಭದಲ್ಲಿ ಅವರ ಸಹದ್ಯೋಗಿಗಳು ನೆನೆಪಿಸಿಕೊಂಡರು. ಈ ಸಂಧರ್ಭದಲ್ಲಿ ಬಿಜೆಪಿ ರಾಜ್ಯ ಪ್ರಭಾರಿ ಅರುಣ್‌ ಸಿಂಗ್‌, ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್‌ ಕುಮಾರ್‌ ಕಟೀಲ್‌, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಕಂದಾಯ ಸಚಿವರಾದ ಆರ್‌ ಅಶೋಕ, ಸಹಕಾರ ಸಚಿವರಾದ ಎಸ್‌ ಟಿ ಸೋಮಶೇಖರ್‌, ಗೃಹ ಸಚಿವರಾದ ಅರಗ ಜ್ಞಾನೇಂದ್ರ, ಅದಮ್ಯ ಚೇತನ ಸಂಸ್ಥೆಯ ಟ್ರಸ್ಟಿಗಳಾದ ನಂದಕುಮಾರ್‌, ಪ್ರದೀಪ್‌ ಓಕ್‌, ಐಶ್ಚರ್ಯ ಅನಂತಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Gayathri SG

Recent Posts

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

4 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

19 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

27 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

41 mins ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

41 mins ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

1 hour ago