ಬೆಂಗಳೂರು: ಅಮೃತಹಳ್ಳಿ ಠಾಣಾ ವ್ಯಾಪ್ತಿಯ ಗೋದ್ರೇಜ್ ಅಪಾರ್ಟ್ಮೆಂಟ್ನ 11ನೇ ಮಹಡಿಯಿಂದ ಜಿಗಿದು ವೈದ್ಯನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಯ 31 ವರ್ಷದ ವೈದ್ಯ ಪೃಥ್ವಿರಾಜ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ಗುರುತಿಸಲಾಗಿದೆ.
ಮೂರು ತಿಂಗಳಿನ ಹಿಂದೆ ಮದುವೆಯಾಗಿದ್ದರು.ಇವರ ಪತ್ನಿಯೂ ವೈದ್ಯೆಯೇ ಆಗಿದ್ದಾರೆ . ಹೃದಯ ಸಂಬಂಧಿ ಕಾಯಿಲೆಯನ್ನು ಮನೆಯವರಿಗೆ ಹೇಳಿಕೊಳ್ಳಲಾಗದೇ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ.
ಇವರು ಕೆಲ ದಿನಗಳಿಂದ ಹೃದಯ ನೋವಿನ ಬಗ್ಗೆ ಹೇಳಿಕೊಳ್ಳುತ್ತಿದ್ದರು. ಕೆಲಸ ಮಾಡೋದಕ್ಕು ಕಷ್ಟ ಆಗುತ್ತಿದೆ. ಕೆಲ ಕಾಲ ಕೂಡಾ ವಿಶ್ರಾಂತಿ ಪಡೆದುಕೊಂಡು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಸ್ನೇಹಿತರು ಮಾಹಿತಿ ನೀಡಿದ್ದಾರೆ.