News Karnataka Kannada
Sunday, April 28 2024
ಬೆಂಗಳೂರು ನಗರ

ಬೆಂಗಳೂರು: ಯಾವುದೇ ಸಂದರ್ಭದಲ್ಲಿ ಚುನಾವಣೆ ಬಂದರೂ ನಾವು ಸಿದ್ಧ ಎಂದ ಎಚ್ಡಿಕೆ

HDK warns Congress of approaching JD(S) candidates to win
Photo Credit : Facebook

ಬೆಂಗಳೂರು: ಬಿಜೆಪಿಯು ಈ ವರ್ಷದ ಡಿಸೆಂಬರ್‌ ವೇಳೆಗೆ ಚುನಾವಣೆ ಎದುರಿಸಲು ಸಜ್ಜಾಗುತ್ತಿರುವಂತೆ ಕಾಣುತ್ತಿದೆ. ಯಾವುದೇ ಸಂದರ್ಭದಲ್ಲಿ ಚುನಾವಣೆ ಬಂದರೂ ನಾವು ಸಿದ್ಧ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು,ಬಿಜೆಪಿಯು ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆಗೆ ಸಿದ್ಧತೆ ಮಾಡುತ್ತಿದೆ. ಅದಕ್ಕಾಗಿಯೇ ತರಾತುರಿಯಲ್ಲಿ ಸಂಪುಟ ಸಭೆ ನಡೆಸಿ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಎಲ್ಲ ಪಕ್ಷಗಳೂ ಚುನಾವಣೆ ಬಂದಾಗ ಜಾತಿಯ ಅಸ್ತ್ರ ಬಳಸುತ್ತವೆ. ಆದರೆ, ಒಕ್ಕಲಿಗರು ಸರಿಯಾಗಿ ಯೋಚಿಸಿ ನಿರ್ಧಾರ ಮಾಡುತ್ತಾರೆ. ಯಾವತ್ತೂ ಪ್ರಾಮಾಣಿಕರನ್ನೇ ಬೆಂಬಲಿಸುತ್ತಾರೆ ಎಂದರು.

ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸುವುದನ್ನು ವಿರೋಧಿಸಿ ಕಾಂಗ್ರೆಸ್‌ನವರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಗಳಿಂದ ಅನುಕಂಪ ಗಿಟ್ಟಿಸಲು ಸಾಧ್ಯವಿಲ್ಲ’ ಎಂದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು