News Karnataka Kannada
Monday, April 29 2024
ಬೆಂಗಳೂರು ನಗರ

ಬೆಂಗಳೂರು: ಪ್ರವೀಣ್ ಹತ್ಯೆ ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ ಎಂದ ಸಿಎಂ ಬೊಮ್ಮಾಯಿ

Mandya: The Mysuru Sugar Factory has sanctioned Rs. 21 crore to sugarcane growers. Payment - CM Bommai
Photo Credit : Twitter

ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಗಳನ್ನು ಶೀಘ್ರವೇ ಬಂಧಿಸಿ‌ ಉಗ್ರ ಶಿಕ್ಷೆಗೆ ಒಳಪಡಿಸುತ್ತೇವೆ. ಡಿಜಿ‌ ಅವರ‌ ಬಳಿ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಘಟನೆ ಹಿಂದೆ ಯಾರೇ‌ ಇದ್ದರೂ ಬಂಧಿಸುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರ ಜತೆ ನಾತನಾಡಿದ ಅವರು, ಯಾರೂ ಆವೇಶಕ್ಕೆ ಒಳಗಾಗಬಾರದು, ಶಾಂತಿ ಕಾಪಾಡಬೇಕೆಂದು ಮನವಿ ಮಾಡಿದ್ದಾರೆ. ಮಂಗಳೂರು ಎಸ್ಪಿ ಅವರು ಕಾಸರಗೋಡು ಎಸ್ಪಿ ಜೊತೆ ಮಾತಾಡಿದ್ದಾರೆ. ರಾಜ್ಯದ ಡಿಜಿಪಿ ಕೇರಳ ಡಿಜಿಪಿ ಜೊತೆ ಮಾತನಾಡಿದ್ದಾರೆ. ಆರೋಪಿ ಬೆನ್ನತ್ತಿರುವ ತಂಡದ ಜೊತೆ ಡಿಜಿಪಿ ನಿರಂತರ ಸಂಪರ್ಕದಲ್ಲಿದ್ದಾರೆ. ಆದಷ್ಟು ಬೇಗ ಕೊಲೆಗಡುಕರನ್ನು ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸುತ್ತೇವೆ. ಇದರಲ್ಲಿ ಯಾರಿಗೂ ಯಾವುದೇ ಅನುಮಾನ ಬೇಡ ಎಂದು ಹೇಳಿದರು.

ಸಮಾಜದಲ್ಲಿ ಹಿಂಸೆ ಮಾಡಿ ದುಷ್ಕೃತ್ಯ ಎಸಗುವವರನ್ನು ದಮನ ಮಾಡುವವರೆಗೂ ನಾನು ವಿಶ್ರಮಿಸುವುದಿಲ್ಲ.ಯಾರೂ ಆವೇಶಕ್ಕೆ ಒಳಗಾಗದೇ ಶಾಂತಿ ಸುವ್ಯವಸ್ಥೆ ಕಾಪಾಡಬೇಕು.ಯಾರು ಪ್ರಚೋದನಕಾರಿ ಹೇಳಿಕೆ ಕೊಡದೆ, ತನಿಖೆಗೆ ಎಲ್ಲರು ಸಹಕಾರ ಕೊಡಬೇಕು. ಎನ್‌ಐಎಗೆ ಕೊಡಲು ಕೆಲ ಷರತ್ತುಗಳು ಇವೆ. ಆ ರೀತಿ ಇದ್ದರೆ , ಪ್ರಾಥಮಿಕ ತನಿಖೆ ಆಧರಿಸಿ, ಮುಂದೆ ಎನ್‌ಐಎ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು