ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸುತ್ತೇವೆ. ಡಿಜಿ ಅವರ ಬಳಿ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಘಟನೆ ಹಿಂದೆ ಯಾರೇ ಇದ್ದರೂ ಬಂಧಿಸುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರ ಜತೆ ನಾತನಾಡಿದ ಅವರು, ಯಾರೂ ಆವೇಶಕ್ಕೆ ಒಳಗಾಗಬಾರದು, ಶಾಂತಿ ಕಾಪಾಡಬೇಕೆಂದು ಮನವಿ ಮಾಡಿದ್ದಾರೆ. ಮಂಗಳೂರು ಎಸ್ಪಿ ಅವರು ಕಾಸರಗೋಡು ಎಸ್ಪಿ ಜೊತೆ ಮಾತಾಡಿದ್ದಾರೆ. ರಾಜ್ಯದ ಡಿಜಿಪಿ ಕೇರಳ ಡಿಜಿಪಿ ಜೊತೆ ಮಾತನಾಡಿದ್ದಾರೆ. ಆರೋಪಿ ಬೆನ್ನತ್ತಿರುವ ತಂಡದ ಜೊತೆ ಡಿಜಿಪಿ ನಿರಂತರ ಸಂಪರ್ಕದಲ್ಲಿದ್ದಾರೆ. ಆದಷ್ಟು ಬೇಗ ಕೊಲೆಗಡುಕರನ್ನು ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸುತ್ತೇವೆ. ಇದರಲ್ಲಿ ಯಾರಿಗೂ ಯಾವುದೇ ಅನುಮಾನ ಬೇಡ ಎಂದು ಹೇಳಿದರು.
ಸಮಾಜದಲ್ಲಿ ಹಿಂಸೆ ಮಾಡಿ ದುಷ್ಕೃತ್ಯ ಎಸಗುವವರನ್ನು ದಮನ ಮಾಡುವವರೆಗೂ ನಾನು ವಿಶ್ರಮಿಸುವುದಿಲ್ಲ.ಯಾರೂ ಆವೇಶಕ್ಕೆ ಒಳಗಾಗದೇ ಶಾಂತಿ ಸುವ್ಯವಸ್ಥೆ ಕಾಪಾಡಬೇಕು.ಯಾರು ಪ್ರಚೋದನಕಾರಿ ಹೇಳಿಕೆ ಕೊಡದೆ, ತನಿಖೆಗೆ ಎಲ್ಲರು ಸಹಕಾರ ಕೊಡಬೇಕು. ಎನ್ಐಎಗೆ ಕೊಡಲು ಕೆಲ ಷರತ್ತುಗಳು ಇವೆ. ಆ ರೀತಿ ಇದ್ದರೆ , ಪ್ರಾಥಮಿಕ ತನಿಖೆ ಆಧರಿಸಿ, ಮುಂದೆ ಎನ್ಐಎ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು.