News Karnataka Kannada
Saturday, May 11 2024
ಬೆಂಗಳೂರು ನಗರ

ಬೆಂಗಳೂರು: ಯಡಿಯೂರಪ್ಪ ಅವರ ಸಲಹೆಯನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದ ಸಿ.ಟಿ ರವಿ

CT Ravi congratulates Vijayendra on being elected as BJP state president
Photo Credit : Facebook

ಬೆಂಗಳೂರು: ಯಡಿಯೂರಪ್ಪ ಅವರು ಮಾಸ್ ಲೀಡರ್, ಸಿಎಂ ಆಗಿ ಕೆಲಸ ಮಾಡಿದ್ದಾರೆ. ಉತ್ತಮ ಕಾರ್ಯ ಮಾಡಿದ್ದಾರೆ. ಪಾರ್ಟಿ ಕಟ್ಟಿದವರಲ್ಲಿ ಅವರು ಕೂಡ ಒಬ್ಬರು. ಅವರ ಹೇಳಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಚುನಾವಣೆ ನಿಲ್ಲುವುದಿಲ್ಲ ಎಂದಿದ್ದಾರೆ. ಆದರೆ ಸಕ್ರಿಯ ರಾಜಕೀಯದಿಂದ ದೂರ ಹೋಗುತ್ತೇನೆಂದು ಎಂದು ಹೇಳಿಲ್ಲ. ನಮ್ಮ ಪಕ್ಷದಲ್ಲಿ ಪ್ರಧಾನಿಗೂ ಪಾರ್ಲಿಮೆಂಟರಿ ಬೋರ್ಡ್ ನಲ್ಲೇ ಟಿಕೆಟ್ ಅಂತಿಮಗೊಳಿಸುವುದು. ಅದೇ ಸರ್ವೋಚ್ಚ. ಯಾರಿಗೆ ಎಲ್ಲಿ ಟಿಕೆಟ್ ಕೊಡಬೇಕು ಎಂಬ ಅಂತಿಮ ತೀರ್ಮಾನ ಪಾರ್ಲಿಮೆಂಟರಿ ಬೋರ್ಡ್ ಮಾಡುತ್ತದೆ. ನಮ್ಮ ಪಕ್ಷದ ವ್ಯವಸ್ಥೆ ಹೇಗಿದೆ ಎಂದು ಹಿರಿಯ ನಾಯಕ ಆಗಿರುವ ಯಡಿಯೂರಪ್ಪರಿಗೆ ಗೊತ್ತಿದೆ‌. ಅವರು ಕೇವಲ ಸಲಹೆ ನೀಡಿದ್ದಾರೆ. ಅವರ ಸಲಹೆಯನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಇಲ್ಲಿ ಯಾವುದೇ ಗೊಂದಲವಿಲ್ಲ‌ ಎಂದರು.

ಇಲ್ಲದ ಕುರ್ಚಿಗೆ ಕಾಂಗ್ರೆಸ್ ನಾಯಕರು ಹೋರಾಟ ಮಾಡುತ್ತಿದ್ದಾರೆ. ಆದರೆ ಅದು ಅವರಿಗೆ ಸಿಗುವುದಿಲ್ಲ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರತ್ತದೆ. ಕಾಂಗ್ರೆಸ್ ಗೆ ಅಧಿಕಾರ ನೀಡಿದಾಗ ಏನಾಗಿದೆ ಎನ್ನುವುದು ಗೊತ್ತಿದೆ. ಒಬ್ಬರು ಜೈಲಿಗೆ ಹೋಗಿ ಬಂದವರು (ಡಿಕೆಶಿ) ಇನ್ನು ಕೆಲವರು ಜೈಲಿಗೆ ಹೋಗುವ ದಾರಿಯಲ್ಲಿ ಇರುವವರು ಎಂದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು