ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಮಂಗಳವಾರ ಕೋಮು ಸೂಕ್ಷ್ಮ ಎಂದೇ ಪರಿಗಣಿಗತವಾಗಿರುವ ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಿದ್ದಾರೆ , ಈ ಪ್ರದೇಶದಲ್ಲಿ ನೈತಿಕ ಪೊಲೀಸ್ಗಿರಿ ಮತ್ತು ಗೋರಕ್ಷಕರ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸುವ ಸಾಧ್ಯತೆಯಿದೆ.
ಸಚಿವ ಪರಮೇಶ್ವರ್ ಅವರು ಇಂದು ಬೆಳಗ್ಗೆ ಎರಡು ದಿನಗಳ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. ಅವರು ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರನ್ನು ಭೇಟಿ ಮಾಡುವ ಮೊದಲು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಜಿಲ್ಲಾ ಕೇಂದ್ರದಲ್ಲಿರುವ ಪಶ್ಚಿಮ ವಲಯ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಬಳಿಕ ಮಂಗಳೂರು ಪೊಲೀಸ್ ಕಮಿಷನರೇಟ್ನಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಬಳಿಕ ನೆರೆ ಜಿಲ್ಲೆ ಉಡುಪಿಗೆ ಆಗಮಿಸಿ ಉಡುಪಿಯ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಕರಾವಳಿ ಪ್ರದೇಶವನ್ನು ಬಿಜೆಪಿಯ ಭದ್ರಕೋಟೆ ಮತ್ತು ಹಿಂದುತ್ವದ ಪ್ರಯೋಗಶಾಲೆ ಎಂದು ಪರಿಗಣಿಸಲಾಗಿದೆ. ಈ ಪ್ರದೇಶದಲ್ಲಿ ನೈತಿಕ ಪೊಲೀಸ್ಗಿರಿ, ಗೋ ರಕ್ಷಣೆ, ಲವ್ ಜಿಹಾದ್, ಚರ್ಚ್ಗಳ ಮೇಲಿನ ದಾಳಿ ಮತ್ತು ಭಯೋತ್ಪಾದನೆಯ ಹಲವು ಪ್ರಕರಣಗಳು ವರದಿಯಾಗಿವೆ. ಈ ಪ್ರದೇಶವು ಆಗಾಗ್ಗೆ ಕೋಮು ಉದ್ವಿಗ್ನತೆಗೆ ಸಾಕ್ಷಿಯಾಗಿದೆ.
2013 ಮತ್ತು 2018 ರ ನಡುವಿನ ಕಾಂಗ್ರೆಸ್ ಸರ್ಕಾರದ ಹಿಂದಿನ ಆಡಳಿತದಲ್ಲಿ, ಈ ಪ್ರದೇಶವು ಹಿಂದೂ ಕಾರ್ಯಕರ್ತರ ಸರಣಿ ಹತ್ಯೆಗಳಿಗೆ ಸಾಕ್ಷಿಯಾಗಿತ್ತು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈ ಆರೋಪವನ್ನು ಬಿಜೆಪಿಯವರ ಅಪಪ್ರಚಾರ ಎಂದು ಸಮರ್ಥಿಸಿಕೊಂಡಿದೆ. 2019 ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಹಿಜಾಬ್ ಬಿಕ್ಕಟ್ಟು ಎದುರಾಗಿತ್ತು. ಅಲ್ಲದೆ ಪ್ರತೀಕಾರದ ಹತ್ಯೆಗಳಿಗೆ ಸಾಕ್ಷಿಯಾಯಿತು.
ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಹಿಂದುತ್ವ ಸಂಘಟನೆಗಳಿಗೆ ಕಾನೂನು ಕೈಗೆತ್ತಿಕೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ. ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಬಜರಂಗದಳ ಮತ್ತು ಆರ್ಎಸ್ಎಸ್ ಅನ್ನು ನಿಷೇಧಿಸುವ ಬಗ್ಗೆ ಮಾತನಾಡಿದ್ದಾರೆ.
ಸಚಿವ ಪರಮೇಶ್ವರ ಅವರು ಮಾರ್ಚ್ 7 ರಂದು ಕೊಲ್ಲೂರಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.