ಬೆಂಗಳೂರು: ಆನೇಕಲ್ ತಾಲೂಕಿನ ಲಕ್ಷ್ಮಿಸಾಗರದಲ್ಲಿ ವ್ಯಕ್ತಿಯೊಬ್ಬ ತಾನು ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಕೊಲೆಯಾದ ಮಹಿಳೆ ತಮಿಳುನಾಡಿನ ಡೆಂಕಣಿಕೋಟೆ ಮೂಲದ ಮಾದಮ್ಮ. ಈಕೆ ಕೆಲ ವರ್ಷಗಳ ಹಿಂದೆ ತನ್ನ ಪತಿ ತೀರಿಕೊಂಡು ಬಳಿಕ ತಮಿಳುನಾಡಿನಿಂದ ಬಂದು ಲಕ್ಷ್ಮಿಸಾಗರ ಗ್ರಾಮದಲ್ಲಿ ಕಟ್ಟಡ ನಿರ್ಮಾಣ ಕೆಲಸ ಮಾಡಿಕೊಂಡಿದ್ದಳು ಎನ್ನಲಾಗಿದೆ.ಈಕೆಗೆ ಅಲ್ಲಿಯೇ ಕೆಲಸ ಮಾಡುತ್ತಿದ್ದ ಮಣಿ ಎಂಬಾತನ ಪರಿಚಯವಾಗಿದ್ದು, ನಂತರ ಇಬ್ಬರೂ ಒಂದೇ ಮನೆಯಲ್ಲಿ ವಾಸ ಮಾಡುತ್ತಿದ್ದರು.
ಕೆಲಸ ಮುಗಿಸಿ ಬಂದ ಬಳಿಕ ಪ್ರತಿದಿನ ಸಂಜೆ ಇಬ್ಬರಿಗೂ ಮದ್ಯಪಾನ ಮಾಡುವ ಅಭ್ಯಾಸವಿದ್ದು, ಅದೇ ರೀತಿ ಮದ್ಯ ಸೇವಿಸಿದ ವೇಳೆ ಮಾತಿನ ಚಕಮಕಿ ನಡೆದು ಮಣಿ, ದೊಣ್ಣೆಯಿಂದ ಹೊಡೆದು ಆಕೆಯನ್ನು ಹತ್ಯೆ ಮಾಡಿದ್ದಾನೆ.
ಪ್ರಕರಣ ದಾಖಲಿಸಿಕೊಂಡಿರುವ ಸೂರ್ಯ ನಗರ ಠಾಣೆ ಪೊಲೀಸರು ಪರಾರಿಯಾಗಿರುವ ಆರೋಪಿ ಮಣಿ ಪತ್ತೆಗಾಗಿ ಶೋಧಕಾರ್ಯ ಮುಂದುವರೆದಿದೆ.