News Karnataka Kannada
Thursday, May 09 2024
ಬೆಂಗಳೂರು ನಗರ

ಪೇಂಟ್ ಮಿಕ್ಸರ್​ಗೆ ಜಡೆ ಸಿಲುಕಿ ಮಹಿಳೆ ಸಾವು

Woman dies after being hit by paint mixer
Photo Credit : IANS

ಬೆಂಗಳೂರು: ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದ್ದು, ಬಣ್ಣ ಬೆರೆಸುವ ಪೇಂಟ್ ಮಿಕ್ಸರ್​ಗೆ ಸಿಲುಕಿ ಮಹಿಳೆ ಸಾವನ್ನಪ್ಪಿದ್ದಾರೆ.

ರಾಮನಗರ ಮೂಲದ ಶ್ವೇತಾ(34) ಮೃತ ಮಹಿಳೆ. ಶ್ವೇತಾ ರಾಮನಗರ ಮೂಲದ ಸುರೇಶ್‌ ಎಂಬುವರನ್ನು ಮದುವೆಯಾಗಿದ್ದು, ದಂಪತಿಗೆ ಒಂದು ಮಗು ಇದೆ. ಮಲ್ಲತ್ತಹಳ್ಳಿಯಲ್ಲಿ ವಾಸವಾಗಿದ್ದಾರೆ.

ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಪೇಯಿಂಟ್‌ ತಯಾರಿಸಲು ಬಳಸುವ ಕಚ್ಚಾ ವಸ್ತುಗಳನ್ನು ಮಿಕ್ಸ್‌ ಮಾಡುವ ಯಂತ್ರಕ್ಕೆ ಹಾಕಲಾಗಿತ್ತು. ಯಂತ್ರದ ಸ್ವಿಚ್‌ ಆಫ್ ಮಾಡಿ ಪೇಯಿಂಟ್‌ ತೆಗೆದುಕೊಳ್ಳುವ ಬದಲು ಶ್ವೇತಾ, ಹಾಗೆಯೇ ಪೇಯಿಂಟ್‌ ತೆಗೆಯುತ್ತಿದ್ದರು. ಈ ವೇಳೆ ಕೂದಲು ಗ್ರೈಂಡರ್‌ಗೆ ಸಿಲುಕಿಕೊಂಡಿದೆ. ಆಗ ಸಹಾಯಕ್ಕಾಗಿ ಕೂಗಿಕೊಂಡಿದ್ದಾರೆ. ಆದರೆ, ಗ್ರೈಂಡರ್‌ನ ಸದ್ದಿಗೆ ಯಾರಿಗೂ ಕೇಳಿಸಿಲ್ಲ. ಪರಿಣಾಮ ಗ್ರೈಂಡರ್‌ ತಿರುಗುವಾಗ ಶ್ವೇತಾರ ತಲೆ ತುಂಡಾಗಿದೆ. ಕೆಲ ಹೊತ್ತಿನ ಬಳಿಕ ಗ್ರೈಂಡರ್‌ ಬಳಿ ಸಹಕಾರ್ಮಿಕರು ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಕೂಡಲೇ ಪೊಲೀಸರು ಮತ್ತು ಕಾರ್ಖಾನೆ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಗ್ರೈಂಡರ್‌ ನಿಂದ ಹೊರ ತೆಗೆದು ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು.

ಈ ಪ್ರಕರಣ ಸಂಬಂಧ ಆಕೆ ಕೆಲಸ ಮಾಡುತ್ತಿದ್ದ ಕಾರ್ಖಾನೆ ಮಾಲೀಕನ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳ ಲಾಗಿದೆ ಎಂದು ಪೊಲೀಸರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು