ಬೆಂಗಳೂರು: ಅಪಾರ್ಟ್ ಮೆಂಟ್ ಗಳನ್ನು ನಿರ್ಮಿಸುವ ವೇಳೆ ಹಲವು ನಿಯಮಗಳನ್ನು ಪಾಲಿಸಬೇಕಾಗಿರುವುದು ಅನಿವಾರ್ಯ. ಆದರೆ ಕೆಲ ಬಿಲ್ಡರ್ ಗಳು ನಿಯಮಗಳನ್ನು ಪಾಲಿಸುವುದೇ ಇಲ್ಲ. ಇದರಿಂದ ಹಲವು ಅನಾಹುತಗಳು ಸಂಭವಿಸುತ್ತವೆ. ಅಂತಹುದೇ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ.
ಮನೆಯೊಳಗಿದ್ದ ಕಿಟಕಿಯನ್ನು ಕ್ಲೀನ್ ಮಾಡುವಾಗ ಮಹಿಳೆಯೊಬ್ಬರ ಕಾಲು ಜಾರಿದ್ದು ಆಯತಪ್ಪಿ 5ನೇ ಮಹಡಿಯಿಂದಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಖುಷ್ಬು ಅಶೀಷ್ ತ್ರಿವೇದಿ (31) ಎಂಬಾಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾಡುಗೋಡಿ ಸಮೀಪದ ದೊಡ್ಡಬನಹಳ್ಳಿಯ ಬಿಡಿಎ ವಿಂಧ್ಯಗಿರಿ ಅಪಾರ್ಟ್ಮೆಂಟ್ನಲ್ಲಿ ಈ ದುರ್ಘಟನೆ ಶನಿವಾರ ನಡೆದಿದೆ. ಖುಷ್ಬು ಅವರು ಮನೆಯೊಳಗಿದ್ದ ಟೇಬಲ್ ಮೇಲೆ ನಿಂತು ಕಿಟಕಿ ಬಳಿಯಿದ್ದ ಧೂಳನ್ನು ಸ್ವಚ್ಛಗೊಳಿಸುತ್ತಿದ್ದರು.
ಈ ಸಂದರ್ಭದಲ್ಲಿ ಒಮ್ಮೆ ಕಾಲು ಜಾರಿದೆ ಅಷ್ಟೇ ಅದೇ ಕಿಟಕಿಯಿಂದ ಕೆಳಗೆ ಬಿದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ, ಆದರೆ ಆದಾಗಲೇ ಖಷ್ಬು ಮೃತಪಟ್ಟಿದ್ದಾರೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಘಟನೆಗೆ ಕಿಟಕಿಗೆ ಗ್ರಿಲ್ ಅಳವಡಿಸದೇ ಇರುವುದೇ ಕಾರಣ ಎಂದು ಬೆಳಕಿಗೆ ಬಂದಿದೆ.