ಬೆಂಗಳೂರು, ಜ.10: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದ್ವಿಚಕ್ರ ವಾಹನದ ಮೇಲೆ ಬಿದ್ದ ಪರಿಣಾಮ ಮಹಿಳೆ ಮತ್ತು ಆಕೆಯ ಮೂರು ವರ್ಷದ ಮಗ ಮೃತಪಟ್ಟರೆ, ಆಕೆಯ ಪತಿ ಮತ್ತು ಮತ್ತೊಬ್ಬ ಮಗ ಗಾಯಗೊಂಡಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮಂಗಳವಾರ ಎಚ್ ಬಿಆರ್ ಲೇಔಟ್ ಬಳಿಯ ಮೆಟ್ರೋ ನಿರ್ಮಾಣದ ಸ್ಥಳದ ಮೂಲಕ ಸ್ಕೂಟಿಯಲ್ಲಿದ್ದ ಕುಟುಂಬವು ಹಾದುಹೋಗುವಾಗ ಈ ಅಪಘಾತ ಸಂಭವಿಸಿದೆ.
ಮೃತರನ್ನು 25 ವರ್ಷದ ತೇಜಸ್ವಿನಿ ಮತ್ತು ಎರಡೂವರೆ ವರ್ಷದ ಮಗ ವಿಹಾನ್ ಎಂದು ಗುರುತಿಸಲಾಗಿದೆ. ಸಿವಿಲ್ ಎಂಜಿನಿಯರ್ ಲೋಹಿತ್ ಕುಮಾರ್ ತನ್ನ ಪತ್ನಿ ತೇಜಸ್ವಿನಿಯನ್ನು ಕೆಲಸಕ್ಕೆ ಮತ್ತು ಮಕ್ಕಳನ್ನು ಮಕ್ಕಳ ಆರೈಕೆ ಕೇಂದ್ರಕ್ಕೆ ಬಿಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಲೋಹಿತ್ ಕುಮಾರ್ ಮತ್ತು ಇನ್ನೊಬ್ಬ ಮಗ ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡಸದೃಶವಾಗಿ ಪಾರಾಗಿದ್ದಾರೆ. ತೇಜಸ್ವಿನಿ ಮತ್ತು ವಿಹಾನ್ ತಲೆಗೆ ತೀವ್ರ ರಕ್ತಸ್ರಾವದಿಂದ ತೀವ್ರ ಪೆಟ್ಟು ಬಿದ್ದು ಸಾವನ್ನಪ್ಪಿದ್ದಾರೆ. ತೇಜಸ್ವಿನಿ ಧಾರವಾಡದವರು.
ಈ ಘಟನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ದಿಂದ ನಿರ್ಮಾಣ ಕಾರ್ಯದ ಬಗ್ಗೆ ಎಲ್ಲಾ ಮಾಹಿತಿಯನ್ನು ಪಡೆಯುವುದಾಗಿ ಹೇಳಿದರು. ಪೊಲೀಸರು ಹೆಚ್ಚಿನ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.