ಬೆಂಗಳೂರು: ಬೆಳಗಾವಿಯಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿತ್ತು. ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡು, ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿದೆ.
ಜೊತೆಗೆ ಮಾಧ್ಯಮಗಳಲ್ಲಿ ಸಂತ್ರಸ್ತೆಯ ಫೋಟೋ, ಸಂದರ್ಶನ ಬಿತ್ತರಿಸದಂತೆ ನಿರ್ಬಂಧ ಹೇರಲಾಗಿದೆ. ಕೆಲ ಮಾಧ್ಯಮಗಳಲ್ಲಿ ಸಂತ್ರಸ್ತೆಯ ಫೋಟೋ, ವಿಡಿಯೋ ಬಿತ್ತರಿಸಲಾಗುತ್ತಿದೆ. ಇದರಿಂದ ಸಂತ್ರಸ್ತೆ ಘನತೆಗೆ ಧಕ್ಕೆಯಾಗುವ ಹಿನ್ನೆಲೆಯಲ್ಲಿ ನಿರ್ಬಂಧಿಸಲಾಗಿದೆ. ಆದರೆ, ಘಟನೆಯ ಸುದ್ದಿ ಪ್ರಸಾರಕ್ಕೆ ಯಾವುದೇ ನಿರ್ಬಂಧವಿಲ್ಲ ಎಂದು ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರಾದ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಆದೇಶಿಸಿದೆ.