ಬೆಂಗಳೂರು: ಪಕ್ಷವು ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಬಳಿಕ ಬಿಜೆಪಿಯ ಒಳಬೇಗುದಿ ಮತ್ತಷ್ಟು ಹೊರಬಂದಿದೆ. ನಾಯಕರು ದಿನಕ್ಕೊಂದು ಹೇಳಿಕೆ ಪ್ರತಿಹೇಳಿಕೆ ನೀಡುತ್ತಿದ್ದಾರೆ.
ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಸಮನ್ಸ್ ಪಡೆದಿದ್ದ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಮತ್ತೆ ವಾಗ್ದಾಳಿ ಮುಂದುವರಿಸಿದ್ದಾರೆ. ಮತ ಪಡೆಯುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮುಖ ತೋರಿಸುತ್ತೀರಿ. ಹಾಗಿದ್ದರೆ ರಾಜ್ಯಕ್ಕೆ ಹಾಗೂ ಪಕ್ಷಕ್ಕೆ ನಿಮ್ಮ ಕೊಡುಗೆ ಏನು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ, ನನ್ನ ಹೋರಾಟ ಹಾಗೂ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ಬಿಎಸ್ ಯಡಿಯೂರಪ್ಪ ನಿವಾಸದಲ್ಲಿ ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ರೇಣುಕಾಚಾರ್ಯ, ನಿಮಗೆ ಅಪಮಾನ ಮಾಡಿದರೆ ಸುಮ್ಮನಿರಲ್ಲವೆಂದು ಬಿಎಸ್ವೈಗೆ ಹೇಳಿದೆ. ಅವರಿಗೆ ವಯಸ್ಸಾಯಿತು ಎಂದು ಅಧಿಕಾರದಿಂದ ಕೆಳಗಿಳಿಸಿದರು. ಹಾಗಿದ್ದರೆ ರಾಜ್ಯ ಪ್ರವಾಸ ಮಾಡಲು ಯಡಿಯೂರಪ್ಪ ಬೇಕಾ? ವೋಟ್ ಕೇಳಲು ಯಡಿಯೂರಪ್ಪ, ಮೋದಿ ಮುಖ ತೋರಿಸುವುದು ಏಕೆ? ಹಾಗಾದರೆ ರಾಜ್ಯಕ್ಕೆ, ಪಕ್ಷಕ್ಕೆ ನಿಮ್ಮ ಕೊಡುಗೆ ಏನು ಎಂದು ನೇರವಾಗಿ ಪ್ರಶ್ನಿಸಿದ್ದಾರೆ.
ಯಡಿಯೂರಪ್ಪ ಮಾತಿಗೆ ಗೌರವ ಕೊಡ್ತೇನೆ. ಇನ್ನು ಮುಂದೆ ನಾನು ಎಲ್ಲವನ್ನೂ ಬಹಿರಂಗವಾಗಿ ಮಾತಾಡುವುದಿಲ್ಲ. ನನ್ನನ್ನು ಟಾರ್ಗೆಟ್ ಮಾಡಲು ಯಾರಿಂದಲೂ ಆಗುವುದಿಲ್ಲ ನನಗೆ ಯಡಿಯೂರಪ್ಪ, ನರೇಂದ್ರ ಮೋದಿ ಅವರ ಹಾಗೂ ಪಕ್ಷದ ಆಶೀರ್ವಾದವಿದೆ. ಯಾರಿಗೂ ಹೆದರುವುದಿಲ್ಲ, ನನ್ನನ್ನು ತುಳಿಯಲು ಯಾರಿಂದಲೂ ಆಗುವುದಿಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.
ಕಿಡ್ನಾಪ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…
ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…
ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…
ಸೂಪರ್ಬಿಟ್ ರ್ಯಾಪಿಡ್ ಮತ್ತು ಬ್ಲಿಟ್ಜ್ ಚೆಸ್ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ ವಿರುದ್ಧ ಭಾರತದ ಗ್ರ್ಯಾಂಡ್…
ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…