News Karnataka Kannada
Monday, May 06 2024
ಬೆಂಗಳೂರು

ಬೆಂಗಳೂರು: ತೆಲಂಗಾಣ, ಛತ್ತೀಸ್‌ಗಡದಿಂದ ಭತ್ತ, ಅಕ್ಕಿ ಪೂರೈಕೆ – ಸಿದ್ದರಾಮಯ್ಯ

Will retire from politics if he proves he received money for transfer: CM
Photo Credit : News Kannada

ಬೆಂಗಳೂರು: ತೆಲಂಗಾಣ ಸರ್ಕಾರ ರಾಜ್ಯಕ್ಕೆ ಭತ್ತ ಕೊಡುವುದಾಗಿ ಹೇಳಿದೆ. ಛತ್ತೀಸ​ಗಢ ಸರ್ಕಾರ ಕರ್ನಾಟಕಕ್ಕೆ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ತಿಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಂಜಾಬ್​ ಸರ್ಕಾರವೂ ನವೆಂಬರ್​ ತಿಂಗಳಿನಿಂದ ಕೊಡುವುದಾಗಿ ತಿಳಿಸಿದೆ. ಎನ್‌ಸಿಸಿಎಫ್‌ ಕೇಂದ್ರಿಯ ಭಂಡಾರ, ನಫೆಡ್​ನಿಂದ ಕೊಟೆಷನ್ ಕೇಳಿದ್ದೇವೆ. ಅವರು ಕೊಟ್ಟ ಬಳಿಕ ದರ, ಗುಣಮಟ್ಟ, ಪ್ರಮಾಣ ನೋಡಿ ಮುಂದಿನ ತೀರ್ಮಾನ ಮಾಡಲಾಗುವುದು ಎಂದರು.

ರಾಜ್ಯದ ಜನರಿಗೆ 10 ಕೆಜಿ ಅಕ್ಕಿ ನೀಡಲು ಬೇರೆ ರಾಜ್ಯಗಳ ಸಂಪರ್ಕ ಮಾಡಲಾಗುತ್ತಿದೆ. ರಾಜ್ಯಕ್ಕೆ 2 ಲಕ್ಷದ 29 ಸಾವಿರ ಮೆಟ್ರಿಕ್​ ಟನ್ ಅಕ್ಕಿ ಬೇಕು. ಪಂಜಾಬ್​ನವರು ಬಳಿ ಸ್ಟಾಕ್ ಇಲ್ಲ, ಆಂಧ್ರಪ್ರದೇಶದವರ ಬಳಿಯೂ ಅಕ್ಕಿ ಸಿಗುತ್ತಿಲ್ಲ. ಹೀಗಾಗಿ ಸರ್ಕಾರಿ ಸಂಸ್ಥೆಗಳ ಕೊಟೇಷನ್ ಕರೆದಿದ್ದೇವೆ. ಇವತ್ತು ಮೂರು ಗಂಟೆಗೆ ಮೆಗೋಸಿಯೇಷನ್ ಇದೆ. ದರ ಎಷ್ಟು‌ ಎಂಬ ಬಗ್ಗೆ ಚರ್ಚಿಸಲು ಇಂದು 3 ಗಂಟೆಗೆ ಸಭೆ ಕರೆದಿದ್ದೇವೆ. ರಾಗಿ, ಜೋಗಿ ನಮ್ಮ ಬಳಿ ಇದೆ. ಆದರೆ ಇವು ಎರಡು ತಿಂಗಳಿಗೆ ಮಾತ್ರ ಸಾಕಾಗುತ್ತದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು