News Karnataka Kannada
Sunday, May 05 2024
ಬೆಂಗಳೂರು

ಬೆಂಗಳೂರು: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ, ಇನ್ನೋರ್ವ ಆರೋಪಿ ಸೆರೆ

Re-investigation of hate killings, govt to listen to cries of coastal people
Photo Credit : News Kannada

ಬೆಂಗಳೂರು: ದೇಶಾದ್ಯಂತ ಸಂಚಲನ ಉಂಟು ಮಾಡಿದ್ದ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್ ಐ ಎ) ಅಧಿಕಾರಿಗಳು ಬಂಧಿಸಿದ್ದಾರೆ.

ತೌಫೀಲ್​ ಬಂಧಿತ ಆರೋಪಿ. ಎನ್ಐಎ ಅಧಿಕಾರಿಗಳು ಶನಿವಾರ ರಾತ್ರಿ 9.30ಕ್ಕೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಎನ್ಐಎ ಅಧಿಕಾರಿಗಳು ಆರೋಪಿ ಪತ್ತೆಗೆ 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು.

ಪ್ರವೀಣ್ ನೆಟ್ಟಾರು ಅವರನ್ನು ಜುಲೈ 26ರಂದು ಅವರ ಕೋಳಿ ಅಂಗಡಿ ಬಳಿ ಹಂತಕರು ಬರ್ಬರವಾಗಿ ಕೊಲೆ ಮಾಡಿದ್ದರು. ಪ್ರವೀಣ್ ಹತ್ಯೆಯಾಗಿದ್ದು ಮೂರನೇ ಯತ್ನದಲ್ಲಿ ಎನ್ನಲಾಗುತ್ತಿದೆ. ಮೊದಲು ಎರಡು ಬಾರಿ ಹತ್ಯೆ ಯತ್ನ ನಡೆದಿತ್ತು. ಜು.23 ಮತ್ತು ಜು.24 ರಂದೇ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಜು.23 ರಂದು ಅದೇ ಬೈಕ್​ನಲ್ಲಿ ಕೊಲ್ಲಲು ತಂಡ ಬಂದಿದ್ದು, ಆದರೆ ಅಂಗಡಿ ಬಳಿ ಜನ ಇದ್ದಿದ್ದರಿಂದ ವಾಪಾಸ್ ಹೋಗಿದ್ದಾರೆ. ಜು.24 ರಂದು ಸಂಜೆ 4.30ಕ್ಕೆ ಕೊಲ್ಲಲು ಸಂಚು ರೂಪಿಸಲಾಗಿತ್ತು.

ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಒಟ್ಟು 20 ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿರುವ ಒಟ್ಟು 1,500 ಪುಟಗಳ ಚಾರ್ಜ್​ಶೀಟ್ ಅನ್ನು ಎನ್ ಐ ಎ ಅಧಿಕಾರಿಗಳು ಕೋರ್ಟ್​ಗೆ ಸಲ್ಲಿಸಿದ್ದಾರೆ. ಕೊಲೆ ಪ್ರಕರಣ ಸಂಬಂಧ ಈವರೆಗೆ 14 ಆರೋಪಿಗಳನ್ನು ಬಂಧಿಸಿಲಾಗಿದ್ದು, 6 ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು