News Karnataka Kannada
Friday, May 10 2024
ಬೆಂಗಳೂರು

ಬೆಂಗಳೂರು: ನಾಳೆ ಕೋಲಾರಕ್ಕೆ ರಾಹುಲ್‌ ಗಾಂಧಿ

SC to hear Rahul Gandhi's appeal on July 21
Photo Credit : Facebook

ಬೆಂಗಳೂರು: ರಾಹುಲ್‌ ಗಾಂಧಿ ನಾಳೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ (ಏ.16ರಂದು) ಮೊದಲ ದಿನ ಕೋಲಾರದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಭಾನುವಾರ ಮಧ್ಯಾಹ್ನ 12.5ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಬಳಿಕ 12.25ಕ್ಕೆ ಕೋಲಾರಕ್ಕೆ ಆಗಮಿಸಿ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗುವರು. ಬಳಿಕ ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಇದೇ ಸಂದರ್ಭ ಬೆಂಗಳೂರಿನಲ್ಲಿ ಪೌರ ಕಾರ್ಮಿಕರು ಹಾಗೂ ಬೀದಿ ಬದಿ ವ್ಯಾಪಾರಸ್ಥರೊಂದಿಗೆ ಸಂವಾದ ನಡೆಸುವರು. ಬೆಂಗಳೂರಿನಲ್ಲಿ ಭಾನುವಾರ ಉಳಿದುಕೊಳ್ಳುವ ಅವರು ಸೋಮವಾರ ಬೀದರ್‌ಗೆ ತೆರಳಿ ಬಾಲ್ಕಿಯಲ್ಲಿ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಳ್ಳುವರು. ನಂತರ ಹುಮ್ನಾಬಾದ್‌ ಅಭ್ಯರ್ಥಿ ರಾಜಶೇಖರ್‌ ಪರ ಮತಯಾಚನೆ ಮಾಡುವರು. ಬಳಿಕ ಹೈದರಾಬಾದ್‌ ಮೂಲಕ ದೆಹಲಿಗೆ ವಾಪಸ್‌ ತೆರಳುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು