News Karnataka Kannada
Monday, April 29 2024
ಬೆಂಗಳೂರು

ಬೆಂಗಳೂರು: ಸಾಲ ಮನ್ನಾ ಯೋಜನೆಗೆ 553.24 ಕೋಟಿ ರೂ. ಅನುದಾನ ಬಿಡುಗಡೆ

Rs 553.24 crore allocated for loan waiver scheme Release of grants
Photo Credit : By Author

ಬೆಂಗಳೂರು: ಸಹಕಾರ ಸಂಘಗಳ ರೂ1 ಲಕ್ಷ ವರಗಿನ ಸಾಲ ಮನ್ನಾ ಯೋಜನೆಯಲ್ಲಿ ಬಾಕಿ ಇದ್ದ 1.05 ಲಕ್ಷ ರೈತರಿಗೆ ರೂ 553.24 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ, ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳಿ ನಿ, ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾ ಮಂಡಳಿ ನಿ,ಕರ್ನಾಟಕ ರಾಜ್ಯ ಸಹಕಾರ ಮಹಿಳಾ ಮಹಾ ಮಂಡಳಿ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟ, ಸಹಕಾರ ಇಲಾಖೆ ಹಾಗೂ ಎಲ್ಲಾ ರೀತಿಯ ಸಹಕಾರ ಸಂಘಗಳು, ಸೌಹಾರ್ದ ಸಹಕಾರಿ ಇವರುಗಳು ಸಹಯೋಗದಲ್ಲಿ ಹಮ್ಮಿಕೊಳ್ಳಲಾದ’ 69 ನೇ  ಅಖಿಲ ಭಾರತ ಸಹಕಾರ ಸಪ್ತಾಹ  ಹಾಗೂ ‘ಸಹಕಾರ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೋವಿಡ್ ಎರಡನೇ ಅಲೆಯಲ್ಲಿ 6.17 ಲಕ್ಷ ರೈತರಿಗೆ ಮತ್ತು 0.66 ಲಕ್ಷ ಸ್ವಸಹಾಯ ಗುಂಪುಗಳಿಗೆ 2021 ಮಾರ್ಚ್ ನಿಂದ ಡಿಸೆಂಬರ್ ವರೆಗೆ ಮರುಪಾವತಿಗೆ ಬರುವ ಕಂತು ಮುಂದೂಡಿ ಇದರ 102 ಕೋಟಿ ಬಡ್ಡಿ ಯನ್ನು ಪತ್ತಿನ ಸಹಕಾರ ಸಂಸ್ಥೆಗಳಿಗೆ ಭರಿಸಲಾಗಿದೆ. ಯಶಸ್ವಿನಿ ಯೋಜನೆಯನ್ನು ನವೆಂಬರ್ 14 ರಿಂದ ಮರುಜಾರಿಗೊಳಿಸಲಾಗಿದೆ. ಆಯುಷ್ಮಾನ್ ಆರೋಗ್ಯ  ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು

‘ಸಹಕಾರ ರತ್ನ’ ಪ್ರಶಸ್ತಿ ಪಡೆದವರಿಗೆ ಅಭಿನಂದನೆ ಸಲ್ಲಿಸಿದ ಸಭಾಧ್ಯಕ್ಷರು,ಎಲ್ಲರೂ ಸಮಾಜ ಮುಖಿಯಾಗಿ ಕೆಲಸ ಮಾಡಬೇಕು. ಸಹಕಾರ ಕ್ಷೇತ್ರ ಈಗ ಬೆಳೆದಿದೆ. ಅದಕ್ಕೆ ಸವಾಲುಗಳು ಸಹ ಹೆಚ್ಚಿದೆ. ಇದನ್ನು ಸಕಾರಗೊಳಿಸಲು ಎಲ್ಲರೂ ಪ್ರಯತ್ನಿಸಬೇಕೆಂದರು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ಸಹಕಾರ ಸಪ್ತಾಹವನ್ನು ನವೆಂಬರ್ 14 ರಿಂದ 20 ರವರೆಗೆ ರಾಜ್ಯದಲ್ಲಿ ಹಮ್ಮಿಕೊಳ್ಳಲಾಗಿದೆ. ಕಲಬುರಗಿ ಯಲ್ಲಿ ಉದ್ಘಾಟನೆಗೊಂಡ ಸಪ್ತಾಹ ಮೈಸೂರಿನಲ್ಲಿ ಸಮಾರೋಪಗೊಳ್ಳಲಿದೆ.2021-22 ರಲ್ಲಿ 28.42 ಲಕ್ಷ ರೈತರಿಗೆ 20,972 ಕೋಟಿ ಕೃಷಿ ಸಾಲ ವಿತರಿಸಲಾಗಿದೆ. 2022-23 ರಲ್ಲಿ 33 ಲಕ್ಷ ರೈತರಿಗೆ 24 ಕೋಟಿ ರೂ ಕೃಷಿ ಸಾಲದ ಗುರಿ ಹೊಂದಲಾಗಿದ್ದು, ಪ್ರಸ್ತುತ 15.73 ಲಕ್ಷ ರೈತರಿಗೆ 12,022 ಕೋಟಿ ಪಾವತಿಸಲಾಗಿದೆ.  ಹಾಲು ಒಕ್ಕೂಟಗಳ  ಮಹಿಳೆಯರಿಗೆ ಸಾಲ ಸೌಲಭ್ಯ ಸಿಗಲಿದೆ. ಸುಮಾರು 11,000 ಬೀದಿ ಬದಿ ವ್ಯಾಪಾರಿಗಳಿಗೆ ಬಡವರ ಬಂಧು ಯೋಜನೆಯಡಿ ಮಾರ್ಚ್ 2021ರ ಅಂತ್ಯಕ್ಕೆ 7.56 ಕೋಟಿ ಸಾಲ ಮನ್ನಾ ಮಾಡಲಾಗಿದೆ. ಕೋವಿಡ್ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಹಕಾರ ಸಂಸ್ಥೆಗಳು 53 ಕೋಟಿ ದೇಣಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ 12.75 ಕೋಟಿ ನೆರವು ನೀಡಿದೆ ಎಂದರು.

ಇದೇ ವೇಳೆ 54 ಜನರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಯಶಸ್ವಿನಿ ಕಾರ್ಡ್ ಹಾಗೂ ಸಹಕಾರ ವಾರ ಪತ್ರಿಕೆಯನ್ನು ಗಣ್ಯರು ಬಿಡುಗಡೆಗೊಳಿಸಿದರು. ಶಾಸಕರಾದ ಜಿ.ಟಿ.ದೇವೇಗೌಡ ಪ್ರಾಸ್ತಾವಿಕ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾ ಮಂಡಳಿ ಅಧ್ಯಕ್ಷರಾದ ಜಿ.ಪಿ. ಪಾಟೀಲ್, ಕರ್ನಾಟಕ ರಾಜ್ಯ ಸಹಕಾರಿ ಮತ್ತು ಕೃಷಿ ಮತ್ತು ಗ್ರಾಮೀಣ ಬ್ಯಾಂಕ್ ಅಧ್ಯಕ್ಷರಾದ ಕೃಷ್ಣಕುಮಾರ್.ಡಿ, ರಾಜ್ಯ ಮಹಿಳಾ ಸಹಕಾರ ಮಹಾ ಮಂಡಲದ ಅಧ್ಯಕ್ಷೆ ಶಕುಂತಲಾ.ಕೆ.ಬೆಲ್ದಾಳೆ, ರಾಜ್ಯ ಸಹಕಾರ ತೋಟಗಾರಿಕಾ ಮಹಾಮಂಡಲ ಅಧ್ಯಕ್ಷರಾದ ಡಾ.ಬಿ.ಡಿ.ಭೂಕಾಂತ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು