News Karnataka Kannada
Monday, April 29 2024
ಬೆಂಗಳೂರು

ಬೆಂಗಳೂರು: ಕೈ ತಪ್ಪಿದ ಸಚಿವ ಸ್ಥಾನ, ಹಲವರ ಅಸಮಾಧಾನ, ತಾಳ್ಮೆಯ ಪಾಠ ಹೇಳಿದ ಬಂಡೆ

Shivakumar says he has received positive advice from Gadkari
Photo Credit : News Kannada

ಬೆಂಗಳೂರು: “ದಿವಂಗತ ಧರಂ ಸಿಂಗ್ ನೇತೃತ್ವದ ಸರ್ಕಾರ ಮತ್ತು ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರದ ಅವಧಿಯಲ್ಲಿ ನನಗೆ ಸಂಪುಟಕ್ಕೆ ಸೇರ್ಪಡೆಗೊಳ್ಳುವ ಅವಕಾಶ ದೊರೆತಿರಲಿಲ್ಲ. ಆದರೆ ನಾನು ನಾನು ತಾಳ್ಮೆ ಕಳೆದುಕೊಳ್ಳಲಿಲ್ಲ. ಅದೇ ರೀತಿ ಕ್ಯಾಬಿನೆಟ್ ಹುದ್ದೆ ದೊರೆಯದವರೂ ಕೂಡ ತಾಳ್ಮೆಯಿಂದಿರಬೇಕು ಎಂದು ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಏತನ್ಮಧ್ಯೆ, ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಲಕ್ಷ್ಮಣ ಸವದಿ ಅವರಿಗೆ ಮುಂಬರುವ ದಿನಗಳಲ್ಲಿ ಕ್ಯಾಬಿನೆಟ್ ಸ್ಥಾನ ನೀಡಬೇಕೆಂದು ಪ್ರಮುಖ ಲಿಂಗಾಯತ ಮಠಾಧೀಶ ಗುರು ಸಿದ್ದರಾಜಯೋಗೀಂದ್ರ ಸ್ವಾಮೀಜಿ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅನುಭವಿ  ರಾಜಕಾರಣಿಗಳಾಗಿದ್ದು, ಅವರಿಗೆ ಸಂಪುಟ ಸ್ಥಾನ ಸಿಗಬೇಕಿತ್ತು. ಲಕ್ಷ್ಮಣ ಸವದಿ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡರೆ ಪಕ್ಷಕ್ಕೆ ಲಾಭವಾಗಲಿದೆ ಎಂದು ತಿಳಿಸಿದ್ದಾರೆ. ಲಕ್ಷ್ಮಣ ಸವದಿ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಸಂದೇಶಗಳನ್ನು ಹಾಕಲಾರಂಭಿಸಿದ್ದಾರೆ.

“ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಿಂದ ಪಕ್ಷಕ್ಕೆ ಹೊಸ ಶಕ್ತಿ ಬಂದಿದೆ ಎಂದು ನೀವು (ಸಿದ್ದರಾಮಯ್ಯ)  ಹೇಳಿದ್ದೀರಿ. ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸವದಿ ಕಾರಣ. ಆದರೆ, ನೀವು ಅವರನ್ನು ಬಳಸಿಕೊಂಡು ಮರೆತಿದ್ದೀರಿ” ಎಂದು ಪೋಸ್ಟ್‌ ಹಾಕಲು ಆರಂಭಿಸಿದ್ದಾರೆ.

ಬಿಜೆಪಿಯ ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ಸೋಲಿಸಿದ ಚಾಮರಾಜನಗರದ ಹಿರಿಯ ಕಾಂಗ್ರೆಸ್ ಮುಖಂಡ ಪುಟ್ಟರಂಗಶೆಟ್ಟಿ ವಿಧಾನಸಭೆಯ ಉಪಸಭಾಪತಿ ಸ್ಥಾನವನ್ನು ನಿರಾಕರಿಸಿದ್ದಾರೆ. ಈ ಬಾರಿ ಸಚಿವ ಸಂಪುಟ ಸೇರುವ ನಿರೀಕ್ಷೆಯಲ್ಲಿದ್ದರು. ಆದರೆ ಸಚಿವ ಸ್ಥಾನ ದೊರೆಯದ ಕಾರಣ ಶಾಸಕರಾಗಿಯೇ ಮುಂದುವರಿಯುವುದಾಗಿ ತಿಳಿಸಿದ್ದಾರೆ.

ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ. ದೇಶಪಾಂಡೆ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಸಚಿವ ಸಂಪುಟದ ಸ್ಥಾನ ವಂಚಿತರಾಗಿ ಹರಿಪ್ರಸಾದ್ ಅಸಮಾಧಾನಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು