ಬೆಂಗಳೂರು: ತೆರಿಗೆ ವಸೂಲಿ ಮಾಡಿ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 5 ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ ದೊರೆತಿದೆ. ಮುಂದಿನ ಕ್ಯಾಬಿನೆಟ್ನಲ್ಲಿ ಈ ಬಗ್ಗೆ ಚರ್ಚೆ ನಡೆಸಿ ಯೋಜನೆ ರೂಪಿಸಿ ಅಧಿಕೃತವಾಗಿ ಜಾರಿಗೊಳಿಸಲಾಗುವುದು ಎಂದರು.
ಗೃಹ ಜ್ಯೋತಿ ಯೋಜನೆಯಡಿ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತೇವೆ. ಇದಕ್ಕೆ ಸುಮಾರು ತಿಂಗಳಿಗೆ 1200 ಕೋಟಿ ರೂ. ಆಗಬಹುದು. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 200 ರೂ. ಹಾಕಲಾಗುವುದು. ಅನ್ನ ಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ, ಈ ವರ್ಷದ ಪದವೀದರ, ಪಿಎಚ್ಡಿ, ಎಂಬಿಬಿಎಸ್ ಪದವೀದರ ನಿರುದ್ಯೋಗಿಗಳಿಗೆ ಎರಡೂವರೆ ವರ್ಷಗಳ ವರೆಗೆ ತಿಂಗಳಿಗೆ ಮೂರು ಸಾವಿರ ರೂ. ನೀಡಲಾಗುವುದು.
ಈ ನಡುವೆ ಉದ್ಯೋಗ ಸಿಕ್ಕರೆ ಯುವ ನಿಧಿ ನೀಡಲಾಗುವುದಿಲ್ಲ. ಡಿಪ್ಲಮಾ ಪಾಸ್ ಮಾಡಿದ ನಿರುದ್ಯೋಗಿಗಳಿ ಒಂದೂವರೆ ಸಾವಿರ ರೂ., ಎಲ್ಲಾ ಸರ್ಕಾರಿ ಬಸ್ನಲ್ಲಿ ಪ್ರಯಾಣಿಸುವ ಕರ್ನಾಟಕದ ಮಹಿಳೆಯರಿಗೆ ಫ್ರೀ ಪಾಸ್ ನೀಡಲಾಗುವುದು, ಬೇರೆ ರಾಜ್ಯಗಳ ಮಹಿಳೆಯರಿಗೆ ಈ ಭಾಗ್ಯ ಇರುವುದಿಲ್ಲ ಎಂದರು.
ಬಣಕಲ್ ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಬಾವಾ(87) ತೀವೃ ಹೃದಯಾಘಾತದಿಂದ ಬಣಕಲ್ ನಲ್ಲಿ ನಿಧನರಾದರು. ಅಹ್ಮದ್ ಭಾವಾರವರು ಹಿರಿಯ ಕಾಂಗ್ರೆಸ್…
ಇಂಡಿಗನತ್ತ ಗ್ರಾಮದಲ್ಲಿ ಮರುಚುನಾವಣೆ ಮುಕ್ತಾಯಗೊಂಡಿದ್ದು 528 ರಲ್ಲಿ 71 ಮಂದಿ ಮಾತ್ರ ಮತ ಚಲಾಯಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಧಾನಿ ಮೋದಿ ಒಬ್ಬ ಘೋಷಣಾ ವೀರ. ಘೋಷಣೆಗಷ್ಟೇ ಪ್ರಧಾನಿ ಸೀಮಿತವಾಗಿದ್ದು, ಘೋಷಣೆಗಳ ಮೂಲಕವೇ ಹಿರೋ ಆದವರು ಎಂದು ಪ್ರಧಾನಮಂತ್ರ ಮೋದಿ…
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಕೇಸ್ಗೆ ದೊಡ್ಡ ತಿರುವು ಸಿಕ್ಕಿದ್ದು, ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಬೆಂಕಿ ಹಚ್ಚಿರುವ…
ಕರ್ನಾಟಕದಲ್ಲಿ ಚುನಾವಣೆ ವಾತಾವರಣ ಚೆನ್ನಾಗಿ ಇದೆ. ಈಗ ಚುನಾವಣೆ ನಡೆದಿರೋ 14 ಕ್ಷೇತ್ರಗಳಲ್ಲಿ ನಾವು 14 ಗೆಲ್ಲುತ್ತೇವೆ. ಮುಂದೆ ನಡೆಯುವ…
ಅತಿ ವೇಗದಲ್ಲಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ದಾಟಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ…