News Karnataka Kannada
Sunday, April 28 2024
ಬೆಂಗಳೂರು

ಬೆಂಗಳೂರು: ಕಾಂಗ್ರೆಸ್‌ ಕರ್ನಾಟಕವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಿದೆ

There is no vacancy in the post of BJP state president, says former minister Ashok
Photo Credit : News Kannada

ಬೆಂಗಳೂರು: ಕರ್ನಾಟಕವನ್ನು ಮಿನಿ ಪಾಕಿಸ್ತಾನ ಮಾಡಲು ಕಾಂಗ್ರೆಸ್ ಹೊರಟಿದೆ ಎಂದು ಬಿಜೆಪಿ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ಸಿಗರು ಮತಾಂತರದ ರಾಯಭಾರಿಯಾಗಲು ಹೊರಟಿದ್ದಾರೆ.

ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಆರ್ಚ್ ಬಿಷಪ್ ಮಾತ್ರ ಸ್ವಾಗತ ಮಾಡಿದ್ದಾರೆ. ಆದರೆ ಯಾವುದೇ ಸ್ವಾಮೀಜಿ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರಾ? ರಾಜ್ಯದಲ್ಲಿ ಈವರೆಗೆ 30-40 ಹಿಂದೂಗಳು ಮತಾಂತರ ಆಗಿದ್ದಾರೆ. ಆಸ್ಪತ್ರೆ, ಶಿಕ್ಷಣ, ಲವ್ ಜಿಹಾದ್ ಇವುಗಳಿಗಾಗಿ ಹಿಂದುಗಳು ಮತಾಂತರ ಆಗಿದ್ದಾರೆ. ಕಾಂಗ್ರೆಸ್ ನಿರ್ಧಾರ ಟಿಪ್ಪು ಸಿದ್ಧಾಂತಗಳಿಗೆ ಪೂರಕವಾಗಿದೆ ಎಂದು ಕಿಡಿಕಾರಿದರು.

ತಮಗೆ ಮತ ಹಾಕಿದ ಒಂದು ವರ್ಗ ಸಂತೃಪ್ತಿಗೊಳಿಸಲು ಕಾಂಗ್ರೆಸ್ ಈ ನಿರ್ಧಾರ ಕೈಗೊಂಡಿದೆ. ಕಾಂಗ್ರೆಸ್ ವೋಟ್ಗಾಗಿ ಯಾವ ಮಟ್ಟಕ್ಕಾದರೂ ಹೋಗಬಹುದು ಎಂಬ ಭಾವನೆ ಮೂಡಿದೆ. ಕರ್ನಾಟಕವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎನಿಸುತ್ತಿದೆ. ನಾವು ಅಧಿಕಾರದಲ್ಲಿದ್ದಾಗ ಈ ಕಾಯ್ದೆ ಜಾರಿಗೆ ತಂದಿದ್ದೆವು. ಆಗ ಪಿಎಫ್ಐ ಅಂತಹವರು ಬಿಟ್ಟು ಬೇರೆ ಯಾರೂ ವಿರೋಧ ಮಾಡಿಲ್ಲ. ಕಾಯ್ದೆ ವಾಪಸ್ ಪಡೆಯದಂತೆ ಬಿಜೆಪಿ ಆಗ್ರಹಿಸುತ್ತದೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು