News Karnataka Kannada
Monday, April 29 2024
ಬೆಂಗಳೂರು

ಬೆಂಗಳೂರು: 2.30 ನಿಮಿಷ ಅವಧಿಯ ‘ನಾಡಗೀತೆ’ ಹಾಡುವಂತೆ ಆದೇಶ ಹೊರಡಿಸಿದ ಸರ್ಕಾರ

Man held for security lapses during budget presentation
Photo Credit : Facebook

ಬೆಂಗಳೂರು: ಸರ್ಕಾರ ಮೈಸೂರು ಅನಂತಸ್ವಾಮಿ ಧಾಟಿಯಲ್ಲಿ  ‘ನಾಡಗೀತೆ’ ಜಯ ಭಾರತ ಜನನಿಯ ತನುಜಾತೆ ಹಾಡುವಂತೆ  ನಿರ್ದಿಷ್ಟ ಧಾಟಿ ಮತ್ತು ಕಾಲಾವಧಿ ನಿಗದಿಪಡಿಸಲು ಆದೇಶ ಹೊರಡಿಸಿದೆ.

ಸಂಗೀತ ಸಂಯೋಜಕ ಮೈಸೂರು ಅನಂತಸ್ವಾಮಿಯವರ ಧಾಟಿಯಲ್ಲಿ ಪೂರ್ಣ ಗೀತೆಯನ್ನು ಯಾವುದೇ  ಪುನರಾವರ್ತನೆ ಇಲ್ಲದಂತೆ ಎರಡು ನಿಮಿಷ 30 ಸೆಕೆಂಡ್ ನಲ್ಲಿ ಹಾಡಬೇಕು ಎಂದು ಸರ್ಕಾರದಿಂದ  ಆದೇಶ ಹೊರಡಿಸಲಾಗಿದೆ.

ಸಾಹಿತಿಗಳು ಮತ್ತು ಸುಗಮ ಸಂಗೀತ ಕ್ಷೇತ್ರದ ಕಲಾವಿದರನ್ನು ಒಳಗೊಂಡಂತೆ ಖ್ಯಾತ ಗಾಯಕಿ ವಿದುಷಿ ಹೆಚ್.ಆರ್. ಲೀಲಾವತಿ ಅಧ್ಯಕ್ಷತೆಯ ಸಮಿತಿ ರಚಿಸಿದ್ದು, ಸಮಿತಿ ನೀಡಿದ ವರದಿ ಆಧರಿಸಿ ಸರ್ಕಾರ ಕ್ರಮ ಕೈಗೊಂಡಿದೆ.

ಕೆಲವು ಕಾರ್ಯಕ್ರಮಗಳಲ್ಲಿ 7 -8 ನಿಮಿಷ ನಾಡಗೀತೆ ಹಾಡುತ್ತಿದ್ದು, ಇದರಿಂದ ಅಶಕ್ತರು ಮತ್ತು ವಿಕಲಚೇತನರಿಗೆ ಅನಾನುಕೂಲವಾಗಿತ್ತು. ಹೀಗಾಗಿ, ಧಾಟಿ ಹಾಗೂ ಕಾಲಮಿತಿಯ ಬಗ್ಗೆ ಸ್ಪಷ್ಟತೆ ತರಬೇಕೆಂಬ ಒತ್ತಾಯ ಕೇಳಿ ಬಂದಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು