News Karnataka Kannada
Friday, May 03 2024
ಬೆಂಗಳೂರು

ಬೆಂಗಳೂರು: ಉಚಿತ ಬಸ್‌ ಪ್ರಯಾಣದಿಂದ ಸಾರಿಗೆ ಇಲಾಖೆಗೆ ನಷ್ಟವಾಗುವ ಮಾತೇ ಇಲ್ಲ

There is no question of the transport department incurring losses due to free bus travel
Photo Credit : Facebook

ಬೆಂಗಳೂರು: ಉಚಿತ ಬಸ್ ಪ್ರಯಾಣದ ಸೌಲಭ್ಯದಿಂದ ಸಾರಿಗೆ ಇಲಾಖೆಗೆ ಭಾರಿ ನಷ್ಟವಾಗಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಇದರ ಬಗ್ಗ ಸ್ಪಷ್ಟನೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಗೆ ನಷ್ಟವಾಗುವ ಮಾತೇ ಇಲ್ಲ ಎಂದು ಹೇಳಿದ್ದಾರೆ.

ಭಾನುವಾರ ಬಿಟಿಎಂಲೇಔಟ್, ಜಯನಗರ ಕ್ಷೇತ್ರದ ಮತದಾರರಿಗೆ ಬನ್ನೇರುಘಟ್ಟ ರಸ್ತೆಯಲ್ಲಿರುವ ಸಕಲವಾರ ವೇರ್ ಹೌಸ್​ನಲ್ಲಿ ಔತಣಕೂಟ ಏರ್ಪಡಿಸಲಾಗಿತ್ತು, ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಹಿಳೆಯರ ಪ್ರಯಾಣದ ಹಣವನ್ನು ಸರ್ಕಾರ ಭರಿಸುತ್ತದೆ ಇದರಲ್ಲಿ ಸಾರಿಗೆ ಇಲಾಖೆಗೆ ನಷ್ಟವಾಗುವುದಿಲ್ಲ. ಉಚಿತ ಪ್ರಯಾಣ ಎನ್ನುವ ಕಾರಣಕ್ಕೆ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ. ಪುಣ್ಯ ಕ್ಷೇತ್ರಗಳು, ದೇವಸ್ಥಾನಗಳಿಗೆ ಭೇಟಿ ನೀಡುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಇನ್ನೊಂದು ತಿಂಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ, ಒಂದು ವೇಳೆ ಪ್ರಯಾಣಿಕರ ಸಂಖ್ಯೆ ಹೆಚ್ಚಾದರೆ, ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ.

ಮಹಿಳೆಯರಿಗೆ ಉಚಿತ ಪ್ರಯಾಣ ಇದ್ದರೂ, ಲಗೇಜ್ ವಿಚಾರದಲ್ಲಿ ಗೊಂದಲ ಆಗುತ್ತಿರುವ ಬಗ್ಗೆ ಮಾತನಾಡಿದ ಅವರು, ಆರಂಭದಲ್ಲಿ ಈ ತರಹದ ಗೊಂದಲಗಳಾಗುವುದು ಸಹಜ, ಮುಂದಿನ ದಿನಗಳಲ್ಲಿ ಎಲ್ಲ ಸಮಸ್ಯೆಗಳನ್ನು ಸರಿಪಡಿಸಲಾಗುವುದು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು