ಬೆಂಗಳೂರು: ತುಳುಕೂಟಕ್ಕೆ 50 ವರ್ಷ ತುಂಬಿದ ಹಿನ್ನೆಲೆ ಇದೇ ಮೊಟ್ಟ ಮೊದಲು ಬಾರಿಗೆ ಬೆಂಗಳೂರಿನಲ್ಲಿ ನವೆಂಬರ್ 25, 26 ರಂದು ಬೆಂಗಳೂರು ಕಂಬಳ ನಡೆಯಲಿದ್ದು,ಕಂಬಳದ ಸ್ಥಳಕ್ಕೆ ಸ್ಪೀಕರ್ ಯು.ಟಿ.ಖಾದರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸ್ಪೀಕರ್ಗೆ ಪುತ್ತೂರು ಶಾಸಕ ಅಶೋಕ್ ರೈ, ಗುಣರಂಜನ್ ಶೆಟ್ಟಿ, ಗುರು ಕಿರಣ್, ಬೆಂಗಳೂರು ತುಳುಕೂಟದ ಅಧ್ಯಕ್ಷ ಸುಂದರ್ ರೈ ಸಾಥ್ ನೀಡಿದ್ದಾರೆ.
ನಗರದ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ಕಂಬಳ ನಡೆಸಲು 151ಮೀಟರ್ ಉದ್ದದ ಟ್ರ್ಯಾಕ್ ನಿರ್ಮಾಣದ ತಯಾರಿ ಮಾಡಲಾಗುತ್ತಿದೆ.
ಕಂಬಳಕ್ಕೆ 150 ಜೋಡಿ ಕೋಣಗಳು ಬರಲಿವೆಯಂತೆ. ಕಂಬಳಕ್ಕೆ ಬರುವ ಕೋಣಗಳನ್ನ ವಾಹನಗಳಲ್ಲಿ ತರಿಸಲಿದ್ದು, ಸಕಲೇಶಪುರ, ಹಾಸನ, ನೆಲಮಂಗಲ ಮೂರು ಕಡೆ ವಿಶ್ರಾಂತಿಗೆ ಅವಕಾಶ ವ್ಯವಸ್ಥೆ ಮಾಡಲಾಗ್ತಿದೆ. ಬೆಂಗಳೂರಿಗೆ ಒಂದು ದಿನ ಮುಂಚೆಯೇ ಕೋಣಗಳು ಎಂಟ್ರಿ ಕೊಡಲಿವೆ.
ಕಂಬಳಕ್ಕೆ ಬೇಕಾದ ಕೆಸರು ಗದ್ದೆ ರೆಡಿ ಮಾಡಲು ಮಣ್ಣು, ನೀರಿನ ಟೆಸ್ಟಿಂಗ್ ಈಗಾಗಲೇ ಕಂಪ್ಲೀಟ್ ಆಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ನಟಿ ಅನುಷ್ಕಾ ಶೆಟ್ಟಿ ಸೇರಿ ಹಲವರು ಕಂಬಳಕ್ಕೆ ಬರಲಿದ್ದಾರೆ .