News Karnataka Kannada
Monday, April 29 2024
ಬೆಂಗಳೂರು

ಬೆಂಗಳೂರು: ದುರ್ಬಲ ವರ್ಗದವರ ಕಲ್ಯಾಣವೇ ಸರ್ಕಾರದ ಗುರಿ – ಅಧಿವೇಶದಲ್ಲಿ ರಾಜ್ಯಪಾಲ ಆಶಯ

Welfare of weaker sections is the aim of the government, says Governor
Photo Credit : Facebook

ಬೆಂಗಳೂರು: ವಿಧಾನ ಮಂಡಲ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದ್ದು ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಿದರು. 15ನೇ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ರಾಜ್ಯ ಸರ್ಕಾರ ರೈತರು, ಬಡವರು ದುರ್ಬಲ ವರ್ಗದವರ ಅಭಿವೃದ್ಧಿಗೆ ಬದ್ಧವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಹಾಕಿಕೊಟ್ಟ ಹಾದಿಯಲ್ಲಿ ಕ್ರಮಿಸುವ ವಿಶ್ವಾಸವಿದೆ.

ರೈತ ದೇಶದ ಬೆನ್ನೆಲುಬು, ರೈತರನ್ನು ಸದೃಢಗೊಳಿಸಲು ಸರ್ಕಾರ ಅನೇಕ ಕ್ರಮ ಕೈಗೊಂಡಿದೆ. ಮುಖ್ಯಮಂತ್ರಿ ರೈತ ವಿದ್ಯಾನಿಧಿಯನ್ನು ನೇಕಾರರು, ಕೃಷಿ ಕಾರ್ಮಿಕರು ಮೊದಲಾದ ವರ್ಗಗಳಿಗೆ ವಿಸ್ತರಿಸಲಾಗಿದೆ. ಅದರಂತೆ 10.79 ಲಕ್ಷ ವಿದ್ಯಾರ್ಥಿಗಳಿಗೆ 484 ಕೋಟಿ ರೂ.ಗಳನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗಿದೆ.

ರೈತಶಕ್ತಿ ಯೋಜನೆಯಡಿ ಕೃಷಿ ಯಾಂತ್ರೀಕರಣ ಪ್ರೋತ್ಸಾಹಕ್ಕೆ ಪ್ರತಿ ಎಕರೆಗೆ 250 ರೂ.ಗಳಂತೆ ಗರಿಷ್ಠ, ಐದು ಎಕರೆಗೆ ಡೀಸೆಲ್‌ ಸಹಾಯಧನ ನೀಡುತ್ತಿದ್ದು, ಇದಕ್ಕಾಗಿ 400 ಕೋಟಿ ರೂ. ಒದಗಿಸಲಾಗಿದೆ. 386.98 ಕೋಟಿ ರೂ. ಬಿಡುಗಡೆ ಮಾಡಿದೆ. ಇದರಿಂದ 53.22 ಲಕ್ಷ ರೈತರಿಗೆ ಸಹಾಯವಾಗಿದೆ. ಅಮೃತ ರೈತ, ಮೀನುಗಾರ, ನೇಕಾರರ ಉತ್ಪಾದನೆ ಸಂಸ್ಥೆಗಳಿಗೆ 24.57 ಕೋಟಿ ರೂ. ವೆಚ್ಚ ಮಾಡಲಾಗಿದೆ. ಸುಮಾರು 27,910 ಹೆಕ್ಟೇರ್‌ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳನ್ನು ವಿಸ್ತರಿಸಲಾಗಿದೆ ಎಂದು ರಾಜ್ಯಪಾಲರು ಭಾಷಣದಲ್ಲಿ ವಿವರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು